September 8, 2024

ಅರಮನೆ ಆವರಣದಲ್ಲಿ ಭಾರತ ಸ್ವತಂತ್ರ ಅಮೃತ ಮಹೋತ್ಸವ

1 min read

ಅರಮನೆ ಆವರಣದಲ್ಲಿ ಭಾರತ ಸ್ವತಂತ್ರ ಅಮೃತ ಮಹೋತ್ಸವ

ಮೈಸೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರು ಅರಮನೆಯ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಚುವಲ್ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಇಂದು ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸಂಜೆ 7 ರಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಮೈಸೂರು ಅರಮನೆಯ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಿ ವರ್ಚ್ಯುವಲ್ ಭಾಷಣದಲ್ಲಿ ಮಾತನಾಡಿದ ಅವರು, ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದೆ. ರಾಜ್ಯದ 1.20 ಕೋಟಿ ಮನೆಗಳಲ್ಲಿ ತಿರಂಗ ಹಾರಿಸಲಾಗಿದೆ. ಸ್ವಾತಂತ್ರ್ಯ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇತ್ತೀಚೆಗೆ ಮೈಸೂರಿಗೆ ಬಂದಾಗ ಯುವಕರ ಉತ್ಸಾಹ ನೋಡಿ ಪ್ರೇರಣೆ ಪಡೆದುಕೊಂಡಿದ್ದೇನೆ. ಮುಂದಿನ 25 ವರ್ಷಕ್ಕೆ ಭದ್ರ ಬುನಾದಿ ಹಾಕಬೇಕು. ರಾಷ್ಟ್ರ ನಿರ್ಮಾಣಕ್ಕೆ ಪೂರಕವಾದ ರೀತಿಯ ಆಡಳಿತ ನೀಡುತ್ತೇವೆ ಸಿಎಂ ಬೊಮ್ಮಾಯಿ ಹೇಳಿದರು.

ಅರಮನೆ ಆಡಳಿತ ಮಂಡಳಿ ಸಾಂಸ್ಕೃತಿಕ ಕಾರ್ಯಕ್ರಮಗಳು: ಅಂತರಾಷ್ಟ್ರೀಯ ಕಲಾವಿದ, ಆಪ್ತಮಿತ್ರ ಚಿತ್ರದ ಖ್ಯಾತಿಯ ವಿದ್ವಾನ್ ಶ್ರೀಧರ್ ಜೈನ್ ಮತ್ತು ತಂಡದಿಂದ ರಾತ್ರಿ 8 ಗಂಟೆ ಯಿಂದ 9 ಗಂಟೆಯ ವರೆಗೆ ನೃತ್ಯ ರೂಪಕ ಸೈನಿಕ ಕಾರ್ಯಕ್ರಮ. ರಾತ್ರಿ 9:15 ರಿಂದ 11:15ರ ವರೆಗೆ ಖ್ಯಾತ ಹಿನ್ನಲೆ ಗಾಯಕರಾದ ಅಜಯ್ ವಾರಿಯರ್ ಅಂಕಿತ ಕುಂಡು, ಶಶಿಕಲಾ ಸುನೀಲ್, ನಾಗಚಂದ್ರಿಕಾ ಭಟ್, ರವಿ ಮುರೂರು, ಚಿಂತನ ವಿಕಾಸ್ ಮತ್ತು ತಂಡದವರಿಂದ ವಂದೇ ಮಾತರಂ- ಸಂಗೀತ ಕಾರ್ಯಕ್ರಮ. ರಾತ್ರಿ 11:30 ರಿಂದ 12ಗಂಟೆಯ ವರೆಗೆ ಲೇಸರ್ವಿಷನ್ ರವರಿಂದ ಲೇಸರ್ ಶೋ ಕಾರ್ಯಕ್ರಮ ನಡೆಯಲಿದೆ.
ಅರಮನೆ ಆವರಣದಲ್ಲಿ ವಿವಿಧ ಕಾರ್ಯಕ್ರಮ ಹಿನ್ನಲೇಯಲ್ಲಿ ದೀಪಾಲಂಕಾರದಿಂದ ಮೈಸೂರು ಅರಮನೆ ಜಗಮಗಿಸುತ್ತಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಸ್.ಎ.ರಾಮದಾಸ್ ಹಾಗೂ ಇನ್ನಿತರರ ಬಿಜೆಪಿ ಮುಖಂಡರು ಆಧಿಕಾರಿಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *