ಕಿಚ್ಚನ ಅಭಿಮಾನಿಗಳಿಗೆ ವಿಕ್ರಾಂತ್ ರೋಣ ಚಿತ್ರತಂಡದಿಂದ ಸರ್ಪ್ರೈಸ್
1 min readಸಿನಿಮಾ: ಇದೇ ಏಪ್ರಿಲ್ 15 ಬೆಳಿಗ್ಗೆ 11.10 ಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ವಿಕ್ರಾಂತ್ ರೋಣ ಚಿತ್ರತಂಡದ ಕಡೆಯಿಂದ ಒಂದು ಸರ್ಪ್ರೈಸ್ ಕಾದಿದೆ.
ಸರ್ಪ್ರೈಸ್ ವಿಚಾರದ ಬಗ್ಗೆ ಕಿಚ್ಚ ಸುದೀಪ್ ಇಂದು ಟ್ವೀಟ್ ಮಾಡಿದ್ದಾರೆ. ಏಪ್ರಿಲ್ 15ರ 11:10 ಗಂಟೆಗೆ ಸರ್ಪ್ರೈಸ್ ಕಾದಿದೆ ಎಂದು ಟ್ವೀಟ್ ಮಾಡಿದ್ದಾರೆ. ಸದ್ಯ ಈ ಟ್ವೀಟ್ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಅಷ್ಟೇ ಅಲ್ಲ, ಈ ಸರ್ಪ್ರೈಸ್ ಏನು ಎನ್ನುವ ಕುತೂಹಲ ಕೂಡ ಅಭಿಮಾನಿಗಳಲ್ಲಿ ಕಾಡುತ್ತಿದೆ.
ವಿಕ್ರಾಂತ್ ರೋಣ ಚಿತ್ರವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ವಿಕ್ರಾಂತ್ ರೋಣ ಆಗಿ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದಾರೆ. ಈ ಮೊದಲು ಸಿನಿಮಾಗೆ ಪ್ಯಾಂಥಮ್ ಎಂದು ಹೆಸರಿಡಲಾಗಿತ್ತು. ನಂತರ ಈ ಹೆಸರನ್ನು ವಿಕ್ರಾಂತ್ ರೋಣ ಎಂದು ಮರು ನಾಮಕರಣ ಮಾಡಲಾಗಿತ್ತು. ಅಷ್ಟೇ ಅಲ್ಲ, ಈ ಟೈಟಲ್ ಅನ್ನು ಬುರ್ಜ್ ಖಲೀಫಾ ಮೇಲೆ ಅನಾವರಣ ಮಾಡಲಾಗಿತ್ತು ಅನ್ನೊದು ವಿಶೇಷ.