ಕೊರೊನಾ ಬಂದ ನಂತರ ಸಿದ್ದರಾಮಯ್ಯ ಏನೇನೋ ಮಾತಾಡ್ತಾರೆ: ಸಚಿವ ಎಸ್.ಟಿ.ಸೋಮಶೇಖರ್ ವ್ಯಂಗ್ಯ

1 min read

ಮೈಸೂರು,ಅ.1-ಸಿದ್ದರಾಮಯ್ಯ ಅವರು ಕೋವಿಡ್ ಬಂದು ಗುಣಮುಖರಾದ ಮೇಲೆ ತಾವು ಏನು ಮಾತನಾಡುತ್ತಿದ್ದೇನೆ ಎಂಬುದೇ ಅವರಿಗೆ ತಿಳಿಯುತ್ತಿಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರಿಗೆ ಕೋವಿಡ್ ಬಂದ ಮೇಲೆ ತಾವು ಏನು ಮಾತನಾಡುತ್ತಿದ್ದೇನೆ ಎಂಬುದೆ ಅವರಿಗೆ ಗೊತ್ತಾಗುತ್ತಿಲ್ಲ. ಅವರಿಗೆ ತಾಲಿಬಾನು ಗೊತ್ತಿಲ್ಲ, ಬಿಜೆಪಿಯೂ ತಿಳಿದಿಲ್ಲ. ಒಂದಕ್ಕೊಂದು ಸಂಬಂಧವೇ ಇಲ್ಲದಂತೆ ಏನೇನೋ ಮಾತನಾಡುತ್ತಿದ್ದಾರೆ ಎಂದರು.
ಆರ್ಎಸ್ಎಸ್ ಬಗ್ಗೆ ತಿಳಿಯಬೇಕಾದರೆ ಯಾವುದಾದರು ಶಾಖೆಗೆ ಬರಲಿ. ಅವರು ಶಾಖೆಗೆ ಬರುವುದಾದರೆ ನಾನೇ ಅವರನ್ನು ಖುದ್ದಾಗಿ ಒಂದು ಶಾಖೆಗೆ ಕರೆದುಕೊಂಡು ಹೋಗುತ್ತೇವೆ. ಅವರಿಗೆ ಮಾನಸಿಕವಾಗಿ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

About Author

Leave a Reply

Your email address will not be published. Required fields are marked *