ಪುನೀತ್ ನಿಧನ ಹಿನ್ನಲೆ/ ಬೆಂಗಳೂರಿನಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್!

1 min read

ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನದಿಂದ ಬೆಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿರ್ಬಂಧಿಸಿ ಬೆಂಗಳೂರು ಪೊಲೀಸ್‌ ಆಯುಕ್ತರಾದ ಕಮಲ್ ಪಂತ್ ಆದೇಶಿಸಿದ್ದಾರೆ.

-ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಅ.29ರಿಂದ ಅ.31ರ ರಾತ್ರಿ 12 ಗಂಟೆಯವರೆಗೆ ಎಲ್ಲಾ ಬಾರ್ ಹಾಗೂ ರೆಸ್ಟೋರೆಂಟ್, ಮದ್ಯದಂಗಡಿ ಹಾಗೂ ಬೇರೆ ಎಲ್ಲಿಯು ಸಹ ಮದ್ಯ ಮಾರಾಟ ಮಾಡದಂತೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ.

  • ಇನ್ನು ಈ ನಿಯಮ ಮೀರಿ ಯಾರಾದರೂ ಮದ್ಯ ಮಾರಾಟಕ್ಕೆ ಯತ್ನಿಸಿದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತ ವಾರ್ನಿಂಗ್ ನೀಡಲಾಗಿದೆ.

ಈಗಾಗಲೇ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದು, ಪುನೀತ್ ನಿವಾಸ ಸೇರಿ ಬೆಂಗಳೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅಂತಿಮ ದರ್ಶನ
  • ಈ‌ ನಡುವೆ ಕಿಡಿಗೇಡಿಗಳು ಸೋಷಿಯಲ್‌ ಮೀಡಿಯಾ ಮೂಲಕ ಸುಳ್ಳು ಸುದ್ದಿ ಹಬ್ಬಿಸಲು ಮುಂದಾದರೆ ಅಂತವರ ವಿರುದ್ದ ಸೂಕ್ತ ಕ್ರಮಕ್ಕು ಸೂಚಿಸಿದ್ದು ಸಾಮಾಜಿಕ ಜಾಲತಾಣದ ಮೇಲು ನಿಗಾ ವಹಿಸಲಾಗಿದೆ.

About Author

Leave a Reply

Your email address will not be published. Required fields are marked *