ಪರಪ್ಪನ ಅಗ್ರಹಾರದ ಜೈಲಿನ ಮೇಲೆ ಸಿಸಿಬಿ ದಾಳಿ: ಗಾಂಜಾ, ಮೊಬೈಲ್ ವಶಕ್ಕೆ
1 min readಬೆಂಗಳೂರು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ.
ಜೈಲಿನಲ್ಲಿದ್ದುಕೊಂಡೇ ಕೆಲವು ಅಪರಾಧಿಗಳು ಅಕ್ರಮ ವ್ಯವಹಾರ ನಡೆಸುತ್ತಿದ್ದು, ಮೊಬೈಲ್, ಗಾಂಜಾ ಮತ್ತು ಇತರೆ ವಸ್ತುಗಳ ಪೂರೈಕೆ ಆರೋಪದ ಹಿನ್ನೆಲೆ ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದಾರೆ.
ಅಧಿಕಾರಿಗಳು ಜೈಲಿನಲ್ಲಿ ಪರಿಶೀಲನೆ ನಡೆಸುವ ವೇಳೆ, ಮೊಬೈಲ್, ಗಾಂಜಾ, ಗಾಂಜಾ ಸೇದುವ ಚಿಲುಮೆ ಮತ್ತು ಇತರೆ ವಸ್ತುಗಳು ಪತ್ತೆಯಾಗಿದ್ದು, ವಶಕ್ಕೆ ಪಡೆದಿದ್ದಾರೆ. ಇಬ್ಬರು ಡಿಸಿಪಿ ನೇತೃತ್ವದಲ್ಲಿ ಸಿಸಿಬಿ ತಂಡ ಈ ದಾಳಿ ನಡೆಸಿದ್ದು, ಕಳೆದ ಮೂರು ಗಂಟೆಯಿಂದ ಕಾರ್ಯಾಚರಣೆ ಮುಂದುವರಿದಿದೆ.