ಪರಪ್ಪನ ಅಗ್ರಹಾರದ ಜೈಲಿನ ಮೇಲೆ ಸಿಸಿಬಿ ದಾಳಿ: ಗಾಂಜಾ, ಮೊಬೈಲ್‌ ವಶಕ್ಕೆ

1 min read

ಬೆಂಗಳೂರು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ.

ಜೈಲಿನಲ್ಲಿದ್ದುಕೊಂಡೇ ಕೆಲವು ಅಪರಾಧಿಗಳು ಅಕ್ರಮ ವ್ಯವಹಾರ ನಡೆಸುತ್ತಿದ್ದು, ಮೊಬೈಲ್, ಗಾಂಜಾ ಮತ್ತು ಇತರೆ ವಸ್ತುಗಳ ಪೂರೈಕೆ ಆರೋಪದ ಹಿನ್ನೆಲೆ ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಅಧಿಕಾರಿಗಳು ಜೈಲಿನಲ್ಲಿ ಪರಿಶೀಲನೆ ನಡೆಸುವ ವೇಳೆ, ಮೊಬೈಲ್, ಗಾಂಜಾ, ಗಾಂಜಾ ಸೇದುವ ಚಿಲುಮೆ ಮತ್ತು ಇತರೆ ವಸ್ತುಗಳು ಪತ್ತೆಯಾಗಿದ್ದು, ವಶಕ್ಕೆ ಪಡೆದಿದ್ದಾರೆ. ಇಬ್ಬರು ಡಿಸಿಪಿ ನೇತೃತ್ವದಲ್ಲಿ ಸಿಸಿಬಿ ತಂಡ ಈ ದಾಳಿ ನಡೆಸಿದ್ದು, ಕಳೆದ ಮೂರು ಗಂಟೆಯಿಂದ ಕಾರ್ಯಾಚರಣೆ ಮುಂದುವರಿದಿದೆ.

About Author

Leave a Reply

Your email address will not be published. Required fields are marked *