ಎಲ್ಲಾ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಜಿಟಿಡಿ
1 min readಮೈಸೂರು: ಮೈಸೂರಿನ ಆರ್.ಸಿ ಬಡಾವಣೆಗೆ ಇಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಭೇಟಿ ನೀಡಿದರು. ಬಡಾವಣೆಯಲ್ಲಿನ ಯುಜಿಡಿ, ವಿದ್ಯುತ್ ದೀಪ, ರಸ್ತೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಶೀಲನೆ ನಡೆಸಿದರು.
ವಿಜಯನಗರ 4ನೇ ಹಂತಕ್ಕೆ ಹೊಂದಿಕೊಂಡಂತೆ ಇರುವ ಆರ್.ಸಿ. ಬಡಾವಣೆಗೆ ಮುಡಾ ಹಾಗೂ ಪಾಲಿಕೆ ಆಯುಕ್ತ ಶ್ರೀ ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ಮುಡಾ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರು.
ಮಳೆ ಬಂದರೆ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಸಮಸ್ಯೆ ಆಗಲಿದ್ದು, ಯುಜಿಡಿ ಸಮಸ್ಯೆ ಸರಿಪಡಿಸಿ. ದಯವಿಟ್ಟು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯ ನಿವಾಸಿಗಳಿಂದ ಶಾಸಕರಿಗೆ ಮನವಿ ಮಾಡಿದರು.
ಕುಡಿಯುವ ನೀರು, ಬೀದಿ ದೀಪ, ಯುಜಿಡಿ, ರಸ್ತೆ ಹಾಗೂ ರಾಜಕಾಲುವೆ ಅತ್ಯಂತ ಪ್ರಮುಖ ಸಮಸ್ಯೆಯಾಗಿದೆ. ಈ ಭಾಗದಲ್ಲಿ ಒಟ್ಟು 7-8 ಬಡಾವಣೆಗಳಿದ್ದು ಹಲವಾರು ವರ್ಷದಿಂದಲೂ ಇದೇ ಸಮಸ್ಯೆ ಇದೆ. ಎಲ್ಲಾ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಶಾಸಕ ಜಿ.ಟಿ. ದೇವೇಗೌಡ.