ಮನುಕುಲಕ್ಕೆ ಸಾಹಿತ್ಯದ ಬೆಳಕು ಚೆಲ್ಲಿದ ಬೇಂದ್ರೆ:ಮಡ್ಡಿಕೆರೆ ಗೋಪಾಲ್

1 min read

ಮೈಸೂರು,ಜ.31-ವರಕವಿ ದ.ರಾ.ಬೇಂದ್ರ ಅವರು ಮನುಕುಲಕ್ಕೆ ಸಾಹಿತ್ಯದ ಬೆಳಕು ಚೆಲ್ಲಿದ ಮಹಾನ್ ಸಾಹಿತಿ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಬಣ್ಣಿಸಿದರು.
ಇಂದು ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಚಾಮುಂಡಿಪುರಂನ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ
ದ.ರಾ.ಬೇಂದ್ರೆ 126ನೇ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಸಸಿಗಳನ್ನು ನೆಟ್ಟು ಬಳಿಕ ಮಾತನಾಡಿದರು.
ಪ್ರಕೃತಿಯನ್ನು ಒಳಗಣ್ಣಿನಿಂದ ನೋಡಿದರೆ ಮಾತ್ರ ಭಾವನೆ ಮೂಡಲು ಸಾಧ್ಯ ಎಂಬುದನ್ನು ವರಕವಿ ದ.ರಾ.ಬೇಂದ್ರ ತಮ್ಮ ಕವನ ಮತ್ತು ಕಾವ್ಯಗಳಿಂದ ನಿರೂಪಿಸಿದ್ದಾರೆ. ಬೇಂದ್ರೆ ಅವರು ಪ್ರಪಂಚದಲ್ಲಿ ಕನ್ನಡ ಸೇವೆಗೆ ಇರುವ ಅವಕಾಶ ಬಳಸಿಕೊಂಡು ಸಾಹಿತ್ಯ ಲೋಕಕ್ಕೆ ಅನನ್ಯ ಕೊಡುಗೆ ಸಲ್ಲಿಸಿದ್ದಾರೆ ಎಂದರು.
ಬೇಂದ್ರೆಯವರು ಸಾಹಿತ್ಯ, ಕೃತಿ, ನಾಟಕ, ಕವನ, ಕಾವ್ಯದ ಮೂಲಕ ನೊಂದ ಜೀವಗಳಲ್ಲಿ ಬದುಕಿನ ಉತ್ಸಾಹದ ಚಿಲುಮೆ ಉಕ್ಕಿಸಿದರು. ಅವರು ಕವಿ, ಸಾಹಿತಿಯಷ್ಟೇ ಆಗಿರಲಿಲ್ಲ, ಇತಿಹಾಸಕಾರ, ಸಂಸ್ಕೃತ ವಿದ್ವಾಂಸ, ಭೌತಶಾಸ್ತ್ರ, ಗಣಿತ ತಜ್ಞ, ಸಂಖ್ಯಾಶಾಸ್ತ್ರ, ತತ್ವಜ್ಞಾನಿ ಹೀಗೆ ಅವರದು ಬಹುಮುಖ ವ್ಯಕ್ತಿತ್ವ. ಅವರ ಕವನ, ಕಾವ್ಯವು ಜನಪದ ಸೂಗಡು ಹಾಗೂ ಪ್ರಾಸದಿಂದ ಕೂಡಿದೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಡಾ. ವೈ.ಡಿ.ರಾಜಣ್ಣ ಮಾತನಾಡಿ, ಬೇಂದ್ರೆಯವರು ಕವಿಯಾಗಿ, ಕಥೆಗಾರರಾಗಿ, ನಾಟಕಕಾರರಾಗಿ ತಮ್ಮ ಸಾಹಿತ್ಯದ ಉದ್ದಕ್ಕೂ ಬದುಕಿನ ಅನುಭವದ ಪಾಠವನ್ನು ಕಾವ್ಯದ ಪಾಕದ ಮೂಲಕ ಕನ್ನಡಿಗರಿಗೆ ಸಾಹಿತ್ಯವನ್ನು ಸಾಹಿತ್ಯದ ಶ್ರೇಷ್ಠತೆಯನ್ನು ಕೊಟ್ಟಂಥವರು. ಬೇಂದ್ರೆಯವರ ಕವಿತೆಗಳು ಕಾಲಾತೀತ ವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ, ಚುಟುಕು ಸಾಹಿತ್ಯ ಪರಿಷತ್ ನ ರಾಜ್ಯ ಸಂಚಾಲಕ ಡಾಕ್ಟರ್ ಎಂ.ಜಿ.ಆರ್.ಅರಸ್, ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್, ನಗರಪಾಲಿಕೆ ಸದಸ್ಯ ಮಾ.ವಿ.ರಾಮ್ ಪ್ರಸಾದ್ , ಕೆ.ಆರ್.ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ , ಗೋಲ್ಡ್ ಸುರೇಶ್, ವಿದ್ಯಾರಣ್ಯ ಸಂಸ್ಥೆಯ ರವಿಶಂಕರ್, ಜೀವದರ ಗಿರೀಶ್, ವಿನಯ್ ಕಣಗಾಲ್, ಸುಚೇಂದ್ರ , ಪುರುಷೋತ್ತಮ್, ಮಹೇಂದ್ರ ಎಂ .ಶೈವಾ, ಚಕ್ರಪಾಣಿ,‌ ನವೀನ್ ಕೆಂಪಿ, ವೆಂಕಟೇಶ್ವರ ವರ್ಕೇಡಿ ಇನ್ನಿತರರು ಹಾಜರಿದ್ದರು.

About Author

Leave a Reply

Your email address will not be published. Required fields are marked *