ನನ್ನ ಮಗನಿಗೆ ಮೂರು ಕ್ಷೇತ್ರ ಕೇಳಿದ್ದೇನೆ- ಕಾಂಗ್ರೆಸ್ ತೀರ್ಮಾನದ ಬಳಿಕ ಕಾಂಗ್ರೆಸ್ ಸೇರುವ ತೀರ್ಮಾನ- ಜಿಟಿಡಿ!
1 min readಮೈಸೂರು : ಮೊದಲು ನನ್ನ ಮಗ ಹರೀಶ್ ಗೌಡ ವಿಚಾರದಲ್ಲಿ ಕಾಂಗ್ರೆಸ್ ತನ್ನ ತೀರ್ಮಾನ ಹೇಳಿದ ಮೇಲೆ ನಂತರ ಉಳಿದ ಮಾತುಕತೆ ನಡೆಸಲಾಗುವುದು ಎಂದು ಮೈಸೂರಿನಲ್ಲಿ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರಿಗೂ ನಾನು ಸ್ಪಷ್ಟವಾಗಿ ಹೇಳಿದ್ದೇನೆ. ನನ್ನ ಮಗನಿಗೆ ಟಿಕೆಟ್ ಕೊಡುವ ವಿಚಾರದಲ್ಲಿ ನಿರ್ಧಾರ ತಿಳಿಸಿ ನಂತರ ನನ್ನ ತೀರ್ಮಾನ ಹೇಳುತ್ತೇನೆ ಅಂತ. ಹಾಗಾಗಿ ನನ್ನ ಮಗನಿಗೆ ಹುಣಸೂರು ಕ್ಷೇತ್ರ ಮೊದಲ ಆದ್ಯತೆ, ಕೆ.ಆರ್. ನಗರ ಎರಡನೇ ಆದ್ಯತೆ, ಚಾಮರಾಜ ಕ್ಷೇತ್ರ ಮೂರನೇ ಆದ್ಯತೆ ಇದೆ. ಈ ಮೂರು ಕ್ಷೇತ್ರದಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ನನ್ನ ಮಗನಿಗೆ ಟಿಕೆಟ್ ನೀಡಲಿ. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ. ಈ ನಡುವೆ ಬಿಜೆಪಿ ಅವರು ಕೂಡ ನಮ್ಮ ಜೊತೆ ಇರಿ ಎಂದು ಕೇಳುತ್ತಿದ್ದಾರೆ. ಅವರು ತಂದೆ – ಮಗ ಇಬ್ಬರಿಗೂ ಟಿಕೆಟ್ ಕೊಡುವ ಭರವಸೆ ನೀಡಿದ್ದಾರೆ. ಆದರೆ ನಾನು ಸದ್ಯಕ್ಕೆ ಯಾವ ನಿರ್ಧಾರ ಮಾಡಿಲ್ಲ. ಇನ್ನೂ 6 ತಿಂಗಳ ನಂತರ ಚಾಮುಂಡಿ ತಾಯಿಯ ನಿರ್ಣಯದಂತೆ ನಾನು ನಿರ್ಧಾರ ಕೈಗೊಳ್ಳುತ್ತೇನೆ. ಚಾಮುಂಡಿ ದೇವಿ ಅಂದು ಏನೂ ಅನುಗ್ರಹಿಸುತ್ತೋ ಅದೇ ನಿರ್ಧಾರ ನನ್ನದ್ದು. ಎಲ್ಲಾ ನಿರ್ಧಾರ ತಾಯಿಗೆ ಬಿಟ್ಟಿದ್ದೇನೆ. ಜೆಡಿಎಸ್ ನವರು ನನ್ನನ್ನು ಇದುವರೆಗೂ ಸಂಪರ್ಕಿಸಿಲ್ಲ. ಪಕ್ಷದ ಯಾವ ಸಭೆ, ಸಮಾರಂಭಕ್ಕೂ ಕರೆಯುತ್ತಿಲ್ಲ.ಸಿಎಂ ಸ್ಥಾನದಿಂದ ಎಚ್ಡಿಕೆ ಕೆಳಗೆ ಇಳಿದ ನಂತರದ ದಿನದಿಂದ ನನ್ನ ಜೊತೆ ಜೆಡಿಎಸ್ ನವರು ಸಂಪರ್ಕದಲ್ಲಿ ಇಲ್ಲ ಎಂದರು.