ಮಂಡ್ಯದಲ್ಲಿ ಎಸಿಬಿ ದಾಳಿ: ಲಂಚ ಪಡೆಯುವ ವೇಳೆ ಸರ್ವೇ ಅಧಿಕಾರಿ ಬಲೆಗೆ

1 min read

ಮಂಡ್ಯ,ಜ.25-ಎಸಿಬಿ ಬೀಸಿದ ಬಲೆಗೆ ಸರ್ವೇ ಅಧಿಕಾರಿಯೊಬ್ಬರು ಬಿದ್ದಿದ್ದಾರೆ. ಶ್ರೀರಂಗಪಟ್ಟಣದ ಮಿನಿ ವಿಧಾನ ಸೌಧದ ಕಚೇರಿಯಲ್ಲಿ ಅಧಿಕಾರಿ 10 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಸರ್ವೇ ಸೂಪರ್ ವೈಸರ್ ಲೋಕೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಶ್ರೀರಂಗಪಟ್ಟಣದ ಮಿನಿ ವಿಧಾನ ಸೌಧದ ಕಚೇರಿಯಲ್ಲಿ ಲೋಕೇಶ್ ಎಸಿಬಿ ಖೆಡ್ಡಾಗೆ ಬಿದ್ದಿದ್ದಾರೆ.
ಲೋಕೇಶ್ ಜಮೀನು ದುರಸ್ತಿಗೆ 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಮುಂಚೆಯೇ 3 ಸಾವಿರ ಹಣವನ್ನು ಮುಂಚಿತವಾಗಿ ಪಡೆದುಕೊಂಡಿದ್ದರು. ಇಂದು 10 ಸಾವಿರ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಲೋಕೇಶ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಎಸಿಬಿ ಡಿವೈಎಸ್ಪಿ ಧರ್ಮೇಂದ್ರ ಅವರ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಪುರುಷೋತ್ತಮ, ವಿನೋದ್ ರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಮಹದೇವು, ಕುಮಾರ್, ಪಾಪಣ್ಣ, ವೆಂಕಟೇಶ್, ಮಹೇಶ್ ಭಾಗಿಯಾಗಿದ್ದರು.

About Author

Leave a Reply

Your email address will not be published. Required fields are marked *