ಆಂಬುಲೆನ್ಸ್ ಸೇವೆಯನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಮತ್ತಷ್ಟು ಚುರುಕುಗೊಳಿಸಬೇಕು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
1 min read![](https://nannurumysuru.com/wp-content/uploads/2021/04/Rohini-Sindhuri.png)
ಮೈಸೂರು: ಆಂಬುಲೆನ್ಸ್ ಸೇವೆಯನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಮತ್ತಷ್ಟು ಚುರುಕುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದರು.
ಬುಧವಾರ ಜಿಲ್ಲಾಧಿಕಾರಿಗಳ ಸಭೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಆಂಬ್ಯುಲೆನ್ಸ್ ಸೇವೆಯ ಬಗ್ಗೆ ದೂರು ಬರುತ್ತಿರುವ ಹಿನ್ನೆಲೆಯಲ್ಲಿ ಈ ಸೇವೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಆಂಬ್ಯುಲೆನ್ಸ್ ವಿಭಾಗಕ್ಕೆ ಪ್ರತ್ಯೇಕವಾಗಿ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ಅವರು ಹೇಳಿದರು.
![](https://nannurumysuru.com/wp-content/uploads/2023/09/Nayana-Kumars.jpg)
ರೋಗಿಗಳು ಆಂಬ್ಯುಲೆನ್ಸ್ ಸೇವೆಯನ್ನು ಪಡೆಯಲು ಜಿಲ್ಲಾ ಕೋವಿಡ್ ವಾರ್ ರೂಂ ನ ಸಹಾಯವಾಣಿ 0821-2424111ಗೆ ಕರೆ ಮಾಡಿ, ಯಾವುದೇ ಸಮಯದಲ್ಲಾದರೂ ಸೇವೆ ಪಡೆಯಬಹುದು ಎಂದರು.
ಜಿಲ್ಲಾದ್ಯಂತ ಆದ್ಯತಾ ವಲಯದ 22 ಕ್ಯಾಟಗೆರಿಯಾ ಮುಂಚೂಣಿ ಕಾರ್ಯಕರ್ತರಿಗೆ ವ್ಯಾಕ್ಸಿನೇಷನ್ ಅನ್ನು ಶನಿವಾರದೊಳಗಾಗಿ ಮುಗಿಸಲೇಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
![](https://nannurumysuru.com/wp-content/uploads/2021/05/WhatsApp-Image-2021-05-27-at-12.02.52-AM-1024x575.jpeg)
ವ್ಯಾಕ್ಸಿನೇಷನ್ ಪಡೆದುಕೊಳ್ಳಲು ಯಾರಿಗೂ ತೊಂದರೆ ಆಗಬಾರದು. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವ್ಯಾಕ್ಸಿನೇಷನ್ ಅನ್ನು ನೀಡಲು ಗೈರು ಹಾಜರಾಗುವ ನಸ್೯ಗಳಿಗೆ ನೋಟಿಸ್ ನೀಡಿ ಎಂದರು.