ವನ್ಯಜೀವಿ ಪ್ರಿಯರಿಗೆ ಸಿಹಿ ಸುದ್ದಿ..! ನಾಳೆಯಿಂದ ಬಂಡೀಪುರ ಸಫಾರಿ ಫುನರಾರಂಭ

1 min read

ಚಾಮರಾಜನಗರ: ಬಂಡೀಪುರ ಹುಲಿಯೋಜನೆ ವ್ಯಾಪ್ತಿಯ ಪ್ರವಾಸೋದ್ಯಮ ಚಟುವಟಿಕೆಗೆ ಗ್ರೀನ್ ಸಿಗ್ನಲ್ ದೊರೆತಿದೆ. ಕಳೆದ ಎರಡು ತಿಂಗಳಿಂದ ಬಂದ್ ಆಗಿದ್ದ ಬಂಡೀಪುರ ಸಫಾರಿ ನಾಳೆಯಿಂದ ಫುನರಾರಂಭ ವಾಗುತ್ತಿದೆ.

ಕೊರೊನಾ ಹೆಚ್ಚಳ ಹಿನ್ನಲೆ ಎಲ್ಲಾ ರೀತಿಯ ಚಟುವಟಿಕೆಗಳು ಬಂದ್ ಆಗಿದ್ದವು. ಇದೀಗ ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ ಸಂಖ್ಯೆ ಇಳಿಮುಖ ಹಿನ್ನಲೆ. ಮತ್ತೆ ಪ್ರವಾಸೋದ್ಯಮ ಚಟುವಟಿಕೆಗಳ ಪುನರಾರಂಭಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ದೊರೆತಿದೆ.

ನಾಳೆಯಿಂದ ಬಂಡೀಪುರ ಸಫಾರಿ ಆರಂಭವಾಗಲಿದ್ದು ಸ್ಥಳದಲ್ಲೇ ಟಿಕೇಟ್ ವ್ಯವಸ್ಥೆ ಮಾಡಲಾಗಿದೆ. ಜುಲೈ 5ರಿಂದ ಆನ್ಲೈನ್ ಬುಕ್ಕಿಂಗ್ ಸೇವೆ ಲಭ್ಯವಾಗಲಿದೆ. ಕೊರೊನಾ ಮುಂಜಾಗ್ರತಾ ಕ್ರಮಗಳ ಮೂಲಕ ಸಫಾರಿ ಪುನರಾರಂಭ ಮಾಡಲಾಗುತ್ತಿದೆ.

ಈ ಬಗ್ಗೆ ಬಂಡೀಪುರ ಹುಲಿಯೋಜನೆ ನಿರ್ದೇಶಕ ಎಸ್.ಆರ್.ನಟೇಶ್ ಮಾಹಿತಿ ನೀಡಿದ್ದು ಪ್ರವಾಸಿಗರು ಹಾಗೂ ವನ್ಯ ಪ್ರಿಯರು ಕೊರೊನಾ ಮಾರ್ಗಸೂಚಿ ಅನುಸರಿಸುವಂತೆ ಮನವಿ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *