ವಾಹನ ತಪಾಸಣೆ ವೇಳೆ ಅಪಘಾತ: ಇಬ್ಬರು ಯುವಕರ ಸಾವು

1 min read

ನಂಜನಗೂಡು: ವಾಹನ ತಪಾಸಣೆ ವೇಳೆ ನಡೆದ ಅಪಘಾತ ಪ್ರಕರಣದಲ್ಲಿ ಗಾಯಗೊಂಡ ಮೂವರ ಪೈಕಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಓರ್ವ ಯುವಕನ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.

ನಂಜನಗೂಡಿನ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತ್ರಿಬಲ್ ರೈಡಿಂಗ್ ನಲ್ಲಿದ್ದ ಮೂವರು ಯುವಕರ ಪೈಕಿ ಕೂಡ್ಲಾಪುರದ ಸಚಿನ್ ಹಾಗೂ ಉತ್ತನಹಳ್ಳಿಯ ದೊರೆಸ್ವಾಮಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಸವಾರ ರಘು ಸ್ಥಿತಿ ಗಂಭೀರ ಎಂದು ಹೇಳಲಾಗಿದೆ. ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ.

ನಿನ್ನೆ ಸಂಜೆ ಡ್ಯೂಟಿ ಮುಗಿಸಿ ಹುಣಸನಾಳು ಗ್ರಾಮದತ್ತ ತ್ರಿಬಲ್ ರೈಡಿಂಗ್ ನಲ್ಲಿ ಬರುತ್ತಿದ್ದ ಯುವಕರು ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನ ಕಂಡು ಹಿಂದಕ್ಕೆ ಪರಾರಿಯಾಗಲು ಯತ್ನಿಸಿದ್ದಾರೆ.ಆತುರದಲ್ಲಿ ಯು ಟರ್ನ್ ತೆಗೆದುಕೊಳ್ಳುತ್ತಿದ್ದ ಸಂಧರ್ಭದಲ್ಲಿ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ಯುವಕರು ಹಾರಿ ಹೋಗಿದ್ದಾರೆ.ಸ್ಥಳೀಯರ ನೆರವಿನಿಂದ ಗಾಯಗೊಂಡವರನ್ನ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾದರೂ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ…

About Author

Leave a Reply

Your email address will not be published. Required fields are marked *