ಮೈಸೂರು ಕೋರ್ಟ್‌ ನಲ್ಲಿ ಬಾಂಬ್‌ ಸ್ಫೋಟ ಪ್ರಕರಣ: ಮೂವರು ತಪ್ಪಿತಸ್ಥರು, ಕೋರ್ಟ್‌ ತೀರ್ಪು

1 min read

ಮೈಸೂರು/ಬೆಂಗಳೂರು,ಅ.8- ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಸಂಭವಿಸಿದ್ದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳು ತಪ್ಪಿತಸ್ಥರೆಂದು ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ನ್ಯಾ. ಕಸನಪ್ಪ ನಾಯ್ಕ್ ಅವರಿದ್ದ ಪೀಠ ತೀರ್ಪು ನೀಡಿದೆ. ತಮಿಳುನಾಡು ಮೂಲದ ಅಬ್ಬಾಸ್ ಅಲಿ, ಸಂಸುನ್ ಕರೀ ರಾಜಾ, ದಾವೂದ್ ಸುಲೇಮಾನ್ ತಪ್ಪಿತಸ್ಥರು.

ಆರೋಪಿಗಳು ‘ಬೇಸ್ ಮೂವ್ಮೆಂಟ್’ ಎಂಬ ಸಂಘಟನೆ ಕಟ್ಟಿಕೊಂಡು ಅಲ್- ಕೈದಾ ಸಂಘಟನೆಗೆ ಬೆಂಬಲ ನೀಡುತ್ತಿದ್ದರು ಎಂಬುದು ವಿಚಾರಣೆ ವೇಳೆ ಸಾಬೀತಾಗಿದೆ.

2016 ಆಗಸ್ಟ್ 6ರಂದು ಮೈಸೂರು ಜಿಲ್ಲಾ ನ್ಯಾಯಾಲಯದ ಶೌಚಾಲಯದಲ್ಲಿ ಅಡುಗೆ ಕುಕ್ಕರಿನಲ್ಲಿ ಬಾಂಬ್ ಇಟ್ಟು ಆರೋಪಿಗಳು ಸ್ಫೋಟಿಸಿದ್ದರು. ಬ್ಯಾಟರಿ, ಗ್ಲಾಸ್ ಪೀಸ್, ಪಟಾಕಿ ಪೌಡರ್, ಕೆಮಿಕಲ್ ಬಳಸಿ ಬಾಂಬ್ ತಯಾರಿಸಿದ್ದರು. ಆಯೂಬ್​ಗೆ ಗೊತ್ತಿಲ್ಲದೆ ಅವನ ಮನೆಯಲ್ಲಿ ಬಾಂಬ್​ ತಯಾರು ಮಾಡಿದ್ದ ಹಿನ್ನೆಲೆ ಹೈಕೋರ್ಟ್ ವಾದ ಆಲಿಸಿ ಕ್ಷಮಾದಾನ ನೀಡಿತ್ತು. ತನಿಖಾ ವೇಳೆ ಎ4 ಪಾತ್ರ ಇಲ್ಲ ಎಂದು ಚಾರ್ಜ್‌ಶೀಟ್​ನಲ್ಲಿ ಕೈಬಿಡಲಾಗಿತ್ತು.

About Author

Leave a Reply

Your email address will not be published. Required fields are marked *