ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಕ್ಷಣಾರ್ಧದಲ್ಲಿ ಕಾರು ಸುಟ್ಟು ಭಸ್ಮ!
1 min read![](https://nannurumysuru.com/wp-content/uploads/2021/08/IMG_20210831_130746-1024x683-1.jpg)
ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಚಾಮರಾಜನಗರದ ಹನೂರು ತಾಲೂಕಿನ ಸೂಳೇರಿಪಾಳ್ಯದಲ್ಲಿ ನಡೆದಿದೆ.
![](https://nannurumysuru.com/wp-content/uploads/2021/08/IMG_20210831_130746-1024x534.jpg)
ಸೂಳೇರಿಪಾಳ್ಯ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದಿಂದ ಬೆಂಗಳೂರಿಗೆ ಹೊರಟಿದ್ದ ಕಾರಿಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
![](https://nannurumysuru.com/wp-content/uploads/2023/09/Nayana-Kumars.jpg)
![](https://nannurumysuru.com/wp-content/uploads/2021/08/IMG_20210831_130713-1024x543.jpg)
ಕಾರು ಕಾಂಚಳ್ಳಿ ಗ್ರಾಮದ ರಾಜು ಎಂಬುವರಿಗೆ ಸೇರಿದ್ದಾಗಿದೆ. ಇನ್ನು ಚಾಲಕ ವೆಂಕಟರಾಜು, ಶ್ರೀನಿವಾಸ್ ಮತ್ತು ರಘು ಎಂಬುವವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಎಚ್ಚೆತ್ತ ಚಾಲಕ ಕಾರನ್ನು ನಿಲ್ಲಿಸಿದ್ದಾನೆ. ಕೂಡಲೇ ಎಲ್ಲರೂ ಕಾರಿಂದಿಳಿದು ಬಚಾವಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.