ಇಂದಿನಿಂದಲೇ ದುರಂತದ ತನಿಖೆ: ಚಾಮರಾಜನಗರ ಜಿಲ್ಲಾಸ್ಪತ್ರೆಗಿಂದು ಶಿವಯೋಗಿ ಕಳಸದ್ ಭೇಟಿ
1 min read![](https://nannurumysuru.com/wp-content/uploads/2021/05/Chamarajanagar-Hospital-Oxygen-Shortage-Tragedy-Investigation.jpg)
ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯಾಗಿರುವ KSRTC ಎಂಡಿ ಶಿವಯೋಗಿ ಕಳಸದ್ ಇಂದಿನಿಂದಲೇ ತನಿಖೆ ನಡೆಸಲಿದ್ದಾರೆ.
ಆಕ್ಸಿಜನ್ ದುರಂತಕ್ಕೆ ನೈಜ ಕಾರಣವೇನು, ಎಷ್ಟು ಮಂದಿ ಸೋಂಕಿತರು ಆಮ್ಲಜನಕ ಕೊರತೆಯಿಂದ ಅಸುನೀಗಿದ್ದಾರೆ, ಈ ಅವಘಡಕ್ಕೆ ಹೊಣೆ ಯಾರು ಹೊರಬೇಕು, ಆಸ್ಪತ್ರೆ ಸಿಬ್ಬಂದಿ ಹಾಗೂ ಜಿಲ್ಲಾಡಳಿತ ಸಿಬ್ಬಂದಿ ವೈಫಲ್ಯದ ಕುರಿತು ತನಿಖೆ ನಡೆಸುವ ಸಾಧ್ಯತೆ ಇದೆ.
![](https://nannurumysuru.com/wp-content/uploads/2023/09/Nayana-Kumars.jpg)
ಆದರೆ, ಆಮ್ಲಜನಕ ಕೊರತೆಯಿಂದ ಮೂವರು ಮೃತಪಟ್ಟಿದ್ದಾರೆ, 24 ಮಂದಿಯಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿರುವುದರಿಂದ ತನಿಖೆಯಿಂದ ಹೆಚ್ಚೇನೆನ್ನೂ ನಿರೀಕ್ಷಸಲಾಗಲ್ಲ, ಘಟನೆಗೆ ಯಾರೂ ಹೊಣೆಯಾಗದೇ ತಿಪ್ಪೆ ಸಾರಿಸುವ ಕೆಲಸ ಮಾಡಲಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿದೆ.