ಮೈಸೂರು ನಗರದಲ್ಲಿ ಕರೋನಾ ನಿಯಂತ್ರಣದಲ್ಲಿದೆ: ಗ್ರಾಮಾಂತರ ಪ್ರದೇಶದಲ್ಲಿ ಆತಂಕ ಹೆಚ್ಚಾಗಿದೆ
1 min read![](https://nannurumysuru.com/wp-content/uploads/2021/05/pratap-simha-1-1.jpg)
ಮೈಸೂರು: ಮೈಸೂರು ನಗರದಲ್ಲಿ ಕರೋನಾ ನಿಯಂತ್ರಣದಲ್ಲಿದೆ. ಆದರೆ ಗ್ರಾಮಾಂತರ ಪ್ರದೇಶದಲ್ಲಿ ಆತಂಕ ಹೆಚ್ಚಾಗಿದೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರು ನಗರದಲ್ಲಿ ಕರೋನಾ ನಿಯಂತ್ರಣದಲ್ಲಿದೆ. ಗ್ರಾಮಾಂತರ ಪ್ರದೇಶದಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲಾಧಿಕಾರಿ ಡಿಹೆಚ್ಓ ಜಿ.ಪಂ ಸಿಇಓ ಈ ಮೂವರು ಅಧಿಕಾರಿಗಳು ಗ್ರಾಮಕ್ಕೆ ಹೋಗಿ ಕೆಲಸ ಮಾಡಬೇಕು. ಪ್ರತಿ ದಿನ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅಂಕಿ ಸಂಖ್ಯೆ ಪಡೆದರೆ ಪ್ರಯೋಜನ ಇಲ್ಲ.
![](https://nannurumysuru.com/wp-content/uploads/2023/09/Nayana-Kumars.jpg)
ಜನಪ್ರತಿನಿಧಿಗಳಾದ ನಾವು ನಮ್ಮ ವ್ಯಾಪ್ತಿಯ ಕೆಲಸಗಳನ್ನ ಮಾಡಿದ್ದೇವೆ. ಕೆಲವು ಕೆಲಸವನ್ನ ಅಧಿಕಾರಿಗಳೇ ಮಾಡಬೇಕು. ಹೀಗಾಗಿ ತುರ್ತಾಗಿ ಮೈಸೂರು ಜಿಲ್ಲಾಡಳಿತ ಹಳ್ಳಿಗಳ ಕಡೆ ಗಮನಹರಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು, ಹಳ್ಳಿಗಳಲ್ಲಿ ಸಭೆ ಮಾಡುತ್ತಿದ್ದಾರೆ. ಈ ಸಭೆಗಳಿಗಿಂತ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ಕೊಡುವುದು ಬಹಳ ಮುಖ್ಯ ಎಂದು ಪ್ರತಾಪ್ ಸಿಂಹ ಸಲಹೆ ನೀಡಿದ್ದಾರೆ.