ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ ‘ಸುಧರ್ಮ’ದ ಸಂಪಾದಕ ಕೆ.ವಿ.ಸಂಪತ್ ಕುಮಾರ್ ನಿಧನ
1 min read![](https://nannurumysuru.com/wp-content/uploads/2021/06/K.V.-Sampath-Kumar.jpg)
ಮೈಸೂರು: ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹೆಗ್ಗಳಿಕೆ ಹೊಂದಿದ್ದ ಮೈಸೂರಿನ ಸುಧರ್ಮ ಸಂಸ್ಕೃತ ದಿನ ಪತ್ರಿಕೆ ಸಂಪಾದಕ ಹಾಗೂ ಮಾಲೀಕರಾಗಿದ್ದ ಕೆ.ವಿ. ಸಂಪತ್ ಕುಮಾರ್ ಅಯ್ಯಂಗಾರ್ (64) ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.
![](https://nannurumysuru.com/wp-content/uploads/2021/06/E5IBCCaUcAQRRsi.jpg)
ಇವರ ಹುಟ್ಟೂರು ನಂಜನಗೂಡು ತಾಲೂಕು ಕಳಲೆ ಗ್ರಾಮ. ತಂದೆ ನಾಡದೂರ್ ವರದರಾಜ್ ಅಯ್ಯಂಗಾರ್, ತಾಯಿ ಸೀತಾಲಕ್ಷ್ಮೀ. ಪಂಡಿತ್ ವರದರಾಜ ಅಯ್ಯಂಗಾರ್ 1970ರಲ್ಲಿ ಪತ್ರಿಕೆ ಪ್ರಾರಂಭಿಸಿದ್ದರು. ಆಕಾಶವಾಣಿಯಲ್ಲಿ ಸಂಸ್ಕೃತದಲ್ಲಿ ವಾರ್ತೆಯನ್ನ ವರದರಾಜ ಅಯ್ಯಂಗಾರ್ ನೀಡುತ್ತಿದ್ದರು. ತಂದೆಯ ಇಚ್ಚೆಯಂತೆ ಸಂಸ್ಕೃತ ಪಸರಿಸುವ ಕೆಲಸಕ್ಕೆ ಮುಂದಾಗಿದ್ದರು.
![](https://nannurumysuru.com/wp-content/uploads/2023/09/Nayana-Kumars.jpg)
2009 ರಲ್ಲಿ “ಸುಧರ್ಮ” ಇ-ಪೇಪರ್ ಆವೃತ್ತಿ ಪ್ರಾರಂಭವಾಗಿದ್ದು ಜಗತ್ತಿನಾದ್ಯಂತ ಹಲವಾರು ಜನರು ಇದನ್ನು ಓದುತ್ತಿದ್ದಾರೆ. ಅವರಿಗೆ 2 ವರ್ಷದ ಹಿಂದೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿತ್ತು. ಆದರೇ ಪ್ರಶಸ್ತಿ ಸ್ವೀಕರಿಸುವ ಮುನ್ನವೇ ಸಂಪತ್ ಕುಮಾರ್ ರವರು ವಿಧಿವಶರಾಗಿದ್ದಾರೆ.