ನಾಳೆ ಬೆಳಗ್ಗೆ ಗಜಪಡೆ ಅರಮನೆ!

1 min read

ಗಜಪಡೆಗೆ ಸುಸ್ವಾಗತ ಕಾರ್ಯಕ್ರಮ

ಮೈಸೂರು – ಮೈಸೂರು ಅರಮನೆ ಮಂಡಳಿ ವತಿಯಿಂದ ನಾಡಹಬ್ಬ ಮೈಸೂರು ದಸರಾ-2022ರ ಮೈಸೂರು ಅರಮನೆಗೆ ಆಗಮಿಸಿರುವ ಗಜಪಡೆಗೆ ಸುಸ್ವಾಗತ ಕಾರ್ಯಕ್ರಮವನ್ನು 2022ರ ಆಗಸ್ಟ್ 10 ರಂದು ಬುಧವಾರ ಬೆಳಿಗ್ಗೆ 9.20 ರಿಂದ 10 ಗಂಟೆಗೆ ಅರಮನೆಯ ಜಯಮಾರ್ಥಾಂಡ ದ್ವಾರದಲ್ಲಿ ಗಜಪಡೆಗೆ ಸ್ವಾಗತ ಮಾಡುವರು.

ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವಹಿಸುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣರಾಜ ಕ್ಷೇತ್ರದ ವಿಧಾನಸಭಾ ಸದಸ್ಯರಾದ ಎಸ್ ಬಿ ರಾಮದಾಸ್ ಅವರು ವಹಿಸುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಸುನಂದ ಪಾಲನೇತ್ರ, ಮೈಸೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ಚಾಮರಾಜನಗರ ಕ್ಷೇತ್ರದ ಲೋಕಸಭಾ ಸದಸ್ಯರಾದ ವಿ.ಶ್ರೀನಿವಾಸ್ ಪ್ರಸಾದ್, ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯರಾದ ಸುಮಲತಾ ಅಂಬರೀಶ್, ವಿಧಾನಸಭೆಯ ಮತ್ತು ವಿಧಾನಪರಿಷತ್ ಶಾಸಕರುಗಳು ಹಾಗೂ ನಿಗಮ ಮಂಡಳಿಯ ಅಧ್ಯಕ್ಷರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

About Author

Leave a Reply

Your email address will not be published. Required fields are marked *