ಕೋವಿಡ್ 2ನೇ ಅಲೆ: ಎಚ್ಚರಿಕೆಯಿಂದ ಇರಲು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮನವಿ

1 min read

ಮೈಸೂರು: ಕೋವಿಡ್ 2ನೇ ಅಲೆಯು ಭಾರತದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು ಎಲ್ಲರೂ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಚ್ಚರಿಕೆಯಿಂದಿರುವಂತೆ ಮೈಸೂರಿನ ಅವಧೂತ ದತ್ತ ಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಅನಗತ್ಯವಾಗಿ ರಸ್ತೆಗಳಲ್ಲಿ ತಿರುಗಾಡಿದಂತೆ ಸಲಹೆ ನೀಡಿದ್ದಾರೆ. ಮನೆಯಿಂದ ಹೊರ ಹೋಗುವ ಸಮಯದಲ್ಲಿ ಮಾಸ್ಕ್ ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸುವಂತೆಯು ಶ್ರೀಗಳು ಸಲಹೆ ನೀಡಿದ್ದಾರೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಹಾಕಿಸಿ ಕೊಳ್ಳುವಂತೆ ಶ್ರೀಗಳು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *