ಬೇಸಿಗೆ ಬೇಗೆ: ರಾಜ್ಯದ 9 ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ
1 min read![](https://nannurumysuru.com/wp-content/uploads/2021/04/Government-Office-.jpg)
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬೇಗೆ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯವನ್ನು ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬಿಸಲನಾಡಿನ ಕಲಬುರಗಿ ವಿಭಾಗಧ ಏಳು ಹಾಗೂ ಬೆಳಗಾವಿ ವಿಭಾಗದ 2 ಜಿಲ್ಲೆಗಳಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಬಿಸಲಿನ ತಾಪ ಹೆಚ್ಚಾಗಿರವು ಹಿನ್ನೆಲೆಯಲ್ಲಿ ಸರಕಾರಿ ಕಚೆರಿಯ ಸಮಯ ಬದಲಿಸಿ ಸರಕಾರ ಆದೇಶ ಹೊರಡಿಸಿದೆ.
![](https://nannurumysuru.com/wp-content/uploads/2023/09/Nayana-Kumars.jpg)
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಸಮಯ ಬದಲಿಸಿ ಆದೇಶ ಹೊರಡಿಸಿದೆ. ಕೆಲಸದ ಸಮಯವನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ಬದಲಾವಣೆ ಮಾಡಲಾಗಿದೆ.
ಈ ಸಮಯದಲ್ಲಿ ಸಾರ್ವನಿಕರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾಯಾನಿರ್ವಹಣಾದಿಕಾರಿ ತುರ್ತು ಕೆಲಸ ನಿರ್ವಹಿಸಲು ಸೂಚಿಸಿದಲ್ಲಿ (ವಿಶೇಷವಾಗಿ ಕೋವಿಡ್-19) ಕಚೇರಿ ಸಮಯ ಬದಲಾವಣೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.