ಮೈಸೂರಿಗೆ ಆಗಮಿಸಿದ ರಾಜ್ಯಪಾಲರು!

1 min read

ಮೈಸೂರಿಗೆ ಆಗಮಿಸಿದ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳಿಂದ ಗೌರವಪೂರ್ವಕ ಸ್ವಾಗತ

ಮೈಸೂರು : ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಾರ್ಚ್ 22ರಂದು ಮೈಸೂರಿನಲ್ಲಿ ನಡೆಯಲಿರುವ ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಆಗಮಿಸುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅವರಿಗೆ ಭವ್ಯ ಸ್ವಾಗತ ಕೋರಿದರು.

ಇಂದು ಬೆಳಿಗ್ಗೆ 6.45 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿದ ರಾಜ್ಯಪಾಲರು ಮೊದಲಿಗೆ ರಾಮನಗರ ಜಿಲ್ಲೆಗೆ ಆಗಮಿಸಿದಾಗ ಅಲ್ಲಿನ ಜಿಲ್ಲಾಧಿಕಾರಿಗಳಾದ ಡಾ.ಕೆ ರಾಕೇಶ್ ಕುಮಾರ್, ಅವರು ಸ್ವಾಗತ ಕೋರಿ, ಬೀಳ್ಕೊಟ್ಟರು.

ಬಳಿಕ ಮಂಡ್ಯ ಜಿಲ್ಲೆಗೆ ಆಗಮಿಸಿದ ರಾಜ್ಯಪಾಲರಿಗೆ ಅಲ್ಲಿನ ಜಿಲ್ಲಾಧಿಕಾರಿಗಳಾದ ಅಶ್ವಥಿ ಎಸ್, ಎಸ್ ಪಿ‌ ಯತೀಶ್, ಸಿಇಓ ದಿವ್ಯ ಪ್ರಭು ಅವರು ಸ್ವಾಗತ ಕೋರಿ, ಬೀಳ್ಕೊಟ್ಟರು.

ಬಳಿಕ ಮೈಸೂರಿಗೆ ಬಂದಾಗ ರಾಜ್ಯಪಾಲರಿಗೆ ಮೈಸೂರಿನ ಎಸ್ಪಿ ಆರ್. ಚೇತನ್, ಡಿಸಿಪಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ.ಎಸ್.ಮಂಜುನಾಥಸ್ವಾಮಿ ಅವರು ಸ್ವಾಗತ ಕೋರಿದರು

ಮೈಸೂರು ಜಿಲ್ಲಾಡಳಿತದಿಂದ ಗೌರವ ರಕ್ಷೆ ನೀಡಲಾಯಿತು.

About Author

Leave a Reply

Your email address will not be published. Required fields are marked *