ಕೇರಳ ಲಾಟರಿ ಮಾರಾಟಕ್ಕೆ ಯತ್ನ- ಆರೋಪಿ ಅರೆಸ್ಟ್!

1 min read

ಚಾಮರಾಜನಗರ

ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನ ಚಾಮರಾಜನಗರ ತಾಲೂಕಿನ ಗೂಳಿಪುರ ಗ್ರಾಮದಲ್ಲಿ ಬಂಧಿಸಲಾಗಿದೆ. ಗೂಳಿಪುರ ಗ್ರಾಮದ ನಂಜುಂಡಸ್ವಾಮಿ ಬಂಧಿತ ಆರೋಪಿಯಾಗಿದ್ದು, ಗ್ರಾಮದಲ್ಲಿ ಅಕ್ರಮ ಲಾಟರಿ ಮಾರಾಟ ಜಾಲ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಪಿಎಸ್ಐ ತಾಜುದ್ದಿನ್ ನೇತೃತ್ವದಲ್ಲಿ ದಾಳಿ ಮಾಡಿ ಮಾಲು ಸಮೇತ ಆರೋಪಿ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 67 ಸಾವಿರ ರೂಪಾಯಿ ಬೆಲೆಯ 1676 ಕೇರಳ ಲಾಟರಿ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಸಂತೆಮರಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲು ಮಾಡಿಕೊಳ್ಳಲಾಗಿದೆ.

About Author

Leave a Reply

Your email address will not be published. Required fields are marked *