ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಸರ್ಕಾರದಿಂದ ಕಡಿವಾಣ!

1 min read

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದ್ದೆ ತಡ ತಡವಾಗಿಯಾದರು ಎಚ್ಚೆತ್ತುಕೊಂಡ ಸರ್ಕಾರ ಇದೀಗಾ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಹೌದು, ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಕಾಂಗ್ರೆಸ್ ಆಯೋಜಿರುವ ನಮ್ಮ ನೀರು ನಮ್ಮ ಹಕ್ಕು ಬೃಹತ್ ಪಾದಯಾತ್ರೆಗೆ ಸರ್ಕಾರ ನಿರ್ಬಂಧ ಹೇರಿದ್ದು, ಹೈಕೋರ್ಟ್ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೆ ಸರ್ಕಾರ ಕಾಂಗ್ರೆಸ್ ಪಾದಯಾತ್ರೆಗೆ ಕಡಿವಾಣ ಹಾಕಿದೆ.

ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದಲೇ ಈ ಆದೇಶ ಜಾರಿಯಾಗಿದ್ದು,‌ ರ್ಯಾಲಿ ಪ್ರತಿಭಟನೆ, ಸಭೆ ಸಮಾರಂಭಗಳಲ್ಲಿ ಭಾಗಿಯಾಗುವವರ ವಿರುದ್ಧ ಸೂಕ್ತ ಕ್ರಮಕ್ಕು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಈ ಮೂಲಕ ಕೋರ್ಟ್ ಸೂಚನೆಯನ್ನು ಸರ್ಕಾರ ಪಾಲಿಸಲು ಮುಂದಾಗಿದೆ. ಆದ್ರೆ ಕಾಂಗ್ರೆಸ್ ಈ ಪಾದಯಾತ್ರೆ ಇಲ್ಲಿಗೆ ನಿಲ್ಲಿಸುತ್ತಾ? ಅಥವಾ ಮುಂದುವರೆಸುತ್ತಾ? ಎಂಬುದೇ ಸದ್ಯದ ಕುತೂಹಲ.

About Author

Leave a Reply

Your email address will not be published. Required fields are marked *