ಸಂಸದ ಪ್ರತಾಪ್ ಸಿಂಹ ವಿರುದ್ಧ ತಿರುಗಿಬಿದ್ದ ಶಾಸಕ ಎಲ್.ನಾಗೇಂದ್ರ

1 min read

ಮೈಸೂರು,ಜ.28-ಮೈಸೂರಿನಲ್ಲಿ ಬಿಜೆಪಿ ಸಂಸದ ವರ್ಸಸ್ ಬಿಜೆಪಿ ಶಾಸಕರು! ಎನ್ನುವಂತಾಗಿದೆ. ಶಾಸಕ ಎಸ್.ಎ.ರಾಮದಾಸ್ ಬೆನ್ನಲ್ಲೇ ಪ್ರತಾಪ್ ಸಿಂಹ ವಿರುದ್ಧ ಸ್ವಪಕ್ಷೀಯದ ಮತ್ತೋರ್ವ ಶಾಸಕ ತಿರುಗಿಬಿದ್ದಿದ್ದಾರೆ.
ಗ್ಯಾಸ್ಪೈಪ್ ಲೈನ್ ಅಳವಡಿಕೆಗೆ ವಿರೋಧ ವ್ಯಕ್ತಪಡಿಸಿರುವ ನಾಗೇಂದ್ರ ಅವರು, ಗ್ಯಾಸ್ ಸಂಪರ್ಕಕ್ಕಾಗಿ ಅಗೆದ ರಸ್ತೆಯನ್ನ ಪ್ರತಾಪ್ ಸಿಂಹ ಬಂದು ಮುಚ್ಚುತ್ತಾರಾ? ರಸ್ತೆ ಹಾಳಾಗುವ ಯೋಜನೆ ಮಾಡಲು ನಾವು ಬಿಡುವುದಿಲ್ಲ. ಈಗಷ್ಟೇ ರಸ್ತೆಗೆ ಡಾಂಬರು ಹಾಕಿಸಿದ್ದೇವೆ. 500 ಕಿ.ಮೀ ವ್ಯಾಪ್ತಿಯಲ್ಲಿ ರಸ್ತೆ ಅಗೆದು ಕಾಮಗಾರಿ ನಡೆಸುತ್ತಾರೆ. 300 ಕೋಟಿ ರೂ.ಪಾಯಿ ಡ್ಯಾಮೇಜ್ಗೆ 99 ಕೋಟಿ ರೂ. ಕೊಟ್ಟರೆ ಸಾಲುತ್ತಾ? ಎಂದು ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ.
ಇನ್ನು ಶಾಸಕರಿಗಿಂತ ಹೆಚ್ಚಿನ ಅಂತರದಲ್ಲಿ ಮತಗಳಿಸಿದ್ದೇನೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ನಾವು, ನಮ್ಮ ಕಾರ್ಯಕರ್ತರು, ಕಾರ್ಪೋರೇಟರ್ಗಳೆಲ್ಲಾ ಓಡಾಡಿ ಓಟ್ ಹಾಕಿಸಿದ್ದೇವೆ. ಕಾರ್ಯಕರ್ತರು, ಕಾರ್ಪೋರೇಟರ್ಗಳಿಲ್ಲದಿದ್ರೆ ಗೆಲ್ಲೋಕೆ ಆಗುತ್ತಾ. ಜೆಡಿಎಸ್ ಅಭ್ಯರ್ಥಿಯನ್ನ ಕಣಕ್ಕಿಳಿಸಿರಲಿಲ್ಲ. ಹೀಗಾಗಿ ಹೆಚ್ಚಿನ ಲೀಡ್ನಲ್ಲಿ ಗೆದ್ದಿದ್ದಾರೆ. ನಾನು ಕೂಡ ಈ ಬಾರಿ ಒಂದು ಲಕ್ಷ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ. ಕೆಲಸದಿಂದ ಜನರ ವಿಶ್ವಾಸಗಳಿಸಬೇಕೆ ಹೊರತು ಮಾತಿನಿಂದಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

About Author

Leave a Reply

Your email address will not be published. Required fields are marked *