ಸರ್ಕಾರಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸಲಹೆ
1 min read![](https://nannurumysuru.com/wp-content/uploads/2021/05/yathindra-siddaramaiah.jpg)
ಮೈಸೂರು: ಕೊರೋನಾ ಸೋಂಕಿಗೆ ವೈಜ್ಞಾನಿಕವಾಗಿ ಸಾಬೀತಾಗದ ಔಷದ ನೀಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ಅನಗತ್ಯ ವೆಚ್ಚವಾಗುತ್ತಿದೆ ಎಂದು ಸರ್ಕಾರಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಐವೆರ್ ಮೆಕ್ಟಿನ್ ಔಷಧ ಕೋವಿಡ್ ಗೆ ಉಪಯೋಗವಿಲ್ಲ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಹಲವು ತಜ್ಞರು ತಿಳಿಸಿದ್ದಾರೆ. ಅಲ್ಲದೇ ಈ ಔಷಧ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಆದರು ಹಲವು ಆಸ್ಪತ್ರೆ, ಆರೋಗ್ಯ ಕೇಂದ್ರದಲ್ಲಿ ಇದನ್ನು ನೀಡಲಾಗ್ತಿದೆ.
![](https://nannurumysuru.com/wp-content/uploads/2023/09/Nayana-Kumars.jpg)
ಕೂಡಲೇ ತಜ್ಞರ ಸಮಿತಿ ರಚಿಸಿ ಯಾವ ಔಷಧ ನೀಡಬೇಕೆಂಬ ವರದಿ ಪಡೆಯಲಿ ಎಂದು ಆರೋಗ್ಯ ಸಚಿವ ಸುಧಾಕರ್’ಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
![](https://nannurumysuru.com/wp-content/uploads/2021/05/WhatsApp-Image-2021-05-17-at-10.49.56-AM-684x1024.jpeg)