ಮೈ ಶುಗರ್ ದುರಸ್ತಿಗೆ ಆ.15 ಗಡುವು ನೀಡಿದ ಸಚಿವ ಕೆ.ಗೋಪಾಲಯ್ಯ‌

1 min read

ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಮೈಶುಗರ್ ಕಾರ್ಖಾನೆ ಪುನಾರಂಭ ವಿಷಯದಲ್ಲಿ ರಾಜ್ಯ ಸರ್ಕಾರ ನುಡಿದಂತೆ ನಡೆದುಕೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

ಬುಧವಾರ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಅವರೊಂದಿಗೆ ಮೈ ಶುಗರ್ ಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಮೈ ಶುಗರ್ ಪುನಾರಂಭದಿಂದ ಜಿಲ್ಲೆಯ ಕಬ್ಬು ಬೆಳೆಗಾರರ ಬದುಕು ಬದಲಾಗಲಿದೆ ಎಂದರು.

ಕಾರ್ಖಾನೆಯ ಯಂತ್ರೋಪಕರಣಗಳ‌ ದುರಸ್ತಿಗೆ ಈಗಾಗಲೇ 50 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ದುರಸ್ತಿ ಕಾರ್ಯ ಕೂಡ ನಡೆಯುತ್ತಿದೆ. ಬರುವ ಆಗಸ್ಟ್ 15 ರೊಳಗೆ ಸಂಪೂರ್ಣ ಯಂತ್ರೋಪಕರಣಗಳ ದುರಸ್ತಿ ಮುಗಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಉಪ ವಿಭಾಗಾಧಿಕಾರಿ‌ ಇತರರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *