ಇಷ್ಟು ದಿನ ಮೈಸೂರು ಜಿಲ್ಲೆಯ ಕೇಸ್- ಹಳೆಯದ್ದು!

1 min read

ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಕೊರೊನ ಸೋಂಕು ಗರಿಷ್ಠ ಮಟ್ಟ ದಾಟಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ. ಕಳೆದ ಮೂರು ದಿನಗಳಲ್ಲಿ ಕಂಡು ಬಂದಿರುವ ಪ್ರಕರಣಗಳು ಹಿಂದಿನದಾಗಿದ್ದು, ಹಳೆಯ ವರದಿ ಸೇರಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ.‌ ಆದರೆ ಇಂದಿನಿಂದ ಬರುವ ಆಯಾ ದಿನಗಳ ಪಾಸಿಟಿವ್ ವರದಿಗಳನ್ನ ನೀಡಲಾಗುವುದು ಎಂದರು.

-ಶಾಲೆಗಳಿಗೆ ರಜೆ ನೀಡುವ ವಿಚಾರದಲ್ಲಿ ಸರ್ಕಾರದ ಆದೇಶ ಬಂದಿದ್ದು ಸ್ಥಳೀಯ ಮಟ್ಟದಲ್ಲಿ ಕಮಿಟಿ ರಚಿಸಲಾಗಿದೆ. ಈ ಕಮಿಟಿಯು ಶಾಲೆಯಲ್ಲಿ ಕಂಡುಬರುವ ಕೇಸ್ ಗಳನ್ನ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಕಮಿಟಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಇರುತ್ತಾರೆ. ಈ ಹಿಂದೆ ಜಿಲ್ಲೆಯ ಶಾಲೆಗಳಿಗೆ ರಜೆ ನೀಡುವ ಅಧಿಕಾರ ಜಿಲ್ಲಾಧಿಕಾರಿಗೆ ನೀಡಲಾಗಿತ್ತು, ಆದರೆ ಈಗ ರಚಿಸಿರುವ ಕಮಿಟಿಗೆ ಆ ಅಧಿಕಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಾಹಿತಿ ನೀಡಿದರು.

About Author

Leave a Reply

Your email address will not be published. Required fields are marked *