ಕರ್ಕಶ ಶಬ್ದ ಮಾಡುತ್ತಿದ್ದ ಪೀಪಿಗೆ ಬ್ರೇಕ್

1 min read

ಮೈಸೂರು: ಅರಮ‌ನೆ ಸುತ್ತಮುತ್ತ, ಪ್ರಮುಖ ಪ್ರವಾಸಿ ತಾಣಗಳ ಬಳಿ ಕರ್ಕಶ ಶಬ್ದ ಮಾಡಿ ಕಿರಿಕಿರಿ ಮಾಡುತ್ತಿದ್ದ ಪೀಪಿ ಮಾರಾಟ ಹಾಗೂ ಬಳಕೆಗೆ ಬ್ರೇಕ್ ಹಾಕಲಾಗಿದೆ.

ಜನರ ಸಮಸ್ಯೆ ಅರ್ಥ ಮಾಡಿಕೊಂಡು ಈ ಆದೇಶವನ್ನ ನಗರ ಪೊಲೀಸ್ ಆಯುಕ್ತರಾದ ಡಾ ಚಂದ್ರಗುಪ್ತ ಅವರು ಮಾಡಿದ್ದಾರೆ. ಈ ಬಗ್ಗೆ ಸಾಕಷ್ಟು ದೂರು ಕೇಳಿ ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಂಡಿದ್ದು ಮುಂದಿನ 15 ದಿನದವರೆಗು ಈ ಆದೇಶ ಜಾರಿಗೊಳಿಸಲಾಗಿದೆ.

ಆಗೊಮ್ಮೆ ಇದನ್ನ ತಪ್ಪಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿಯು ಎಚ್ಚರಿಕೆ ನೀಡಿ ನಗರ ವ್ಯಾಪ್ತಿಯ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಅಧಿಕಾರಿಗಳಿಗೆ ಸೂಚನೆ‌ ನೀಡಲಾಗಿದೆ.

About Author

Leave a Reply

Your email address will not be published. Required fields are marked *