ಗುರುವಾರದಿಂದ ವೈದ್ಯರ ನಡೆ ಹಳ್ಳಿಯ ಕಡೆ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
1 min read![](https://nannurumysuru.com/wp-content/uploads/2021/05/Rohini-Sindhuri-4.jpg)
ಮೈಸೂರು: ರಾಜ್ಯ ಸರ್ಕಾರ ತಿಳಿಸಿರುವ ‘ವೈದ್ಯರ ನಡೆ ಹಳ್ಳಿಯಕಡೆ’ ಕಾರ್ಯಕ್ರಮಕ್ಕೆ ಗುರುವಾರದಿಂದ ಎಲ್ಲಾ ತಾಲ್ಲೂಕುಗಳಲ್ಲಿ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಆಯಾ ಕ್ಷೇತ್ರದ ಶಾಸಕರಿಂದ ಈ ಕಾರ್ಯಕ್ರಮಕ್ಕೆ ಚಾಲನೆ ಕೊಡಿಸಲು ವ್ಯವಸ್ಥೆ ಮಾಡಿಸಬೇಕು ಎಂದು ಮಂಗಳವಾರ ನಡೆದ ವಿಡಿಯೋ ಸಂವಾದದ ಸಭೆಯಲ್ಲಿ ಅವರು ತಿಳಿಸಿದರು.
![](https://nannurumysuru.com/wp-content/uploads/2023/09/Nayana-Kumars.jpg)
ವೈದ್ಯರು ಹಾಗೂ ಎ.ಎನ್.ಎಂ / ಅಂಗನವಾಡಿ ಕಾರ್ಯಕರ್ತರ ತಂಡ ಪ್ರತಿಯೊಂದು ಮನೆಗೆ ತೆರಳಿ ಸೋಂಕು ಲಕ್ಷಣ ಇರುವ ವ್ಯಕ್ತಿಗಳನ್ನು ಗುರುತಿಸಿ ಅತಿ ಹೆಚ್ಚು RAT ಟೆಸ್ಟ್ ಗಳನ್ನು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸೋಂಕಿತರು ಎಲ್ಲಿರುವರೋ ಅಲ್ಲೆ ಅವರನ್ನು ಗುರುತಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.
![](https://nannurumysuru.com/wp-content/uploads/2021/06/WhatsApp-Image-2021-06-02-at-9.37.21-AM.jpeg)