ಸರ್ಕಾರದ ಸುತ್ತೋಲೆ ಬೆನ್ನಲ್ಲೆ ತಮ್ಮ ಆದೇಶ ಹಿಂಪಡೆದ ಮೈಸೂರು ಡಿಸಿ

1 min read

ಮೈಸೂರು: ಮೈಸೂರಿನಲ್ಲಿ ಕೊರೊನಾ ಕಠಿಣ ನಿಯಮಗಳ ಜಾರಿ ವಿಚಾರ. ಸರ್ಕಾರದ ಸುತ್ತೋಲೆ ಬೆನ್ನಲ್ಲೆ ತಮ್ಮ ಆದೇಶ ಹಿಂಪಡೆದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ.

ಡಿಸಿ ರೋಹಿಣಿ ಸಿಂಧೂರಿ ಅವರು ತಮ್ಮ ಆದೇಶವನ್ನು ಹಿಂದಕ್ಕೆ ಪಡೆದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್-19 ನೆಗೆಟಿವ್ ರಿಪೋರ್ಟ್ ಹೊಂದಿರಲು ಸಲಹಾ ಸೂಚನೆ ನೀಡಲಾಗಿತ್ತು. ಸಾರ್ವಜನಿಕರಲ್ಲಿ ಸಲಹಾ ಸೂಚನೆ ಬಗ್ಗೆ ಗೊಂದಲ ಉಂಟಾಗಿದೆ.

ಅಲ್ಲದೆ ಸರ್ಕಾರದ ಸುತ್ತೋಲೆಯಲ್ಲಿ ಕೊವಿರ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತ್ಯೇಕ ಆದೇಶಗಳನ್ನು ಹೊರಡಿಸದಂತೆ ಹೇಳಿದೆ. ಈಗಾಗಲೇ ಇಂತಹ ಆದೇಶ, ಸೂಚನೆ ಹೊರಡಿಸಿದ್ದಲ್ಲಿ ತಕ್ಷಣವೇ ಹಿಂಪಡೆಯಲು ನಿರ್ದೇಶಿಸಿದೆ. ಆದ್ದರಿಂದ ಹೊರಡಿಸಲಾಗಿರುವ ಸಲಹಾ ಸೂಚನೆಯನ್ನು ತಕ್ಷಣದಿಂದ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಸಲಹಾ ಸೂಚನೆಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕೋರಿ ಪತ್ರ ಬರೆಯಲಾಗಿರುತ್ತದೆ. ಸರ್ಕಾರಕ್ಕೆ ಪತ್ರ ಬರೆದ ಮೈಸೂರು ಡಿಸಿ ರೋಹಿಣಿ ಸಿಂಧೂರಿ.

About Author

Leave a Reply

Your email address will not be published. Required fields are marked *