ಚಾಮರಾಜನಗರ, ಮಂಡ್ಯ, ಕೊಡಗು ನಮ್ಮ ಸಹೋದರ ಜಿಲ್ಲೆಗಳು- ಆಕ್ಸಿಜನ್‌ಗಾಗಿ ವಿರಸ ಬೇಡ!!

1 min read

ಮೈಸೂರು: ಮೈಸೂರಿನ ಪ್ರಸ್ತುತ ಬೆಡ್, ಆಕ್ಸಿಜನ್’ ಆಸ್ಪತ್ರೆಗಳ ಲಭ್ಯತೆ ಹಾಗೂ ಯುವ ಸಂಸದ ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದ ಬಗ್ಗೆ ಸಂಸದ ಪ್ರತಾಪ್ ಸಿಂಹ ಮಾಧ್ಯಮಗಳೊಂದಿಗೆ ಮಾತನಾಡಿದರು.

ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ ನಾವು ಸಹೋದರ ಜಿಲ್ಲೆಗಳಿದ್ದಂತೆ. ಆಕ್ಸಿಜನ್ ವಿಚಾರದಲ್ಲಿ ನಮ್ಮ ನಡುವೆ ವಿರಸ ಮೂಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಪರಿಸ್ಥಿತಿ ತಪ್ಪಬೇಕಾದರೆ ರಾಜ್ಯ ಸರ್ಕಾರ ಕೂಡಲೇ ಜಿಲ್ಲಾವಾರು ಆಕ್ಸಿಜನ್ ಕೋಟಾ ನಿಗಧಿ ಮಾಡಬೇಕು. ಕೋಟಾ ನಿಗಧಿಯಾಗದ ಹೊರತು ಈ ಸಮಸ್ಯೆ ಬಗೆಹರಿಯುವುದಿಲ್ಲ. ಮಂಡ್ಯ ಚಾಮರಾಜನಗರದವರು ಇಲ್ಲಿಗೆ ಬಂದಾಗ ನಮಗೆ ಆಕ್ಸಿಜನ್ ಕೊಡಲು ಸಾಧ್ಯವಾಗದಿದ್ದರೆ. ಮೈಸೂರನ್ನ ಮತ್ತೇ ಕಟಕಟೆಯಲ್ಲಿ ನಿಲ್ಲಿಸುವ ಪರಿಸ್ಥಿತಿ ನಿರ್ಮಾಣ ಆಗಲಿದೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ನಾನು ಬಹಳ ಸದ್ದುದ್ದೇಶದಿಂದ ಆಕ್ಸಿಜನ್ ಕೋಟಾ ನಿಗಧಿಗೆ ಮನವಿ ಮಾಡುತ್ತಿದ್ದೇ‌ನೆ. ಮೈಸೂರಿನಲ್ಲಿ 7 ಸಾವಿರ ಬೆಡ್‌ಗಳ ಆಕ್ಸಿಜನ್ ವ್ಯವಸ್ಥೆ ಆಗುತ್ತಿದೆ. ನಮಗು ಆಕ್ಸಿಜನ್ ಕೊರತೆ ಉಂಟಾಗಬಹುದು. ಸರ್ಕಾರ ತುರ್ತಾಗಿ ಕೋಟಾ ನಿಗಧಿ ಮಾಡಲಿ. ಸಿಎಂ ಇದನ್ನ ಆದಷ್ಟು ಬೇಗ ಮಾಡುತ್ತಾರೆಂಬ ವಿಶ್ವಾಸ ಇದೆ ಅಂತ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

https://www.facebook.com/NannuruMysuru/videos/861761067712703

ಬಿಬಿಎಂಪಿಯ ಬೆಡ್ ಬ್ಲಾಕ್ ದಂಧೆ ವಿಚಾರ:

ಸಂಸದ ತೇಜಸ್ವಿ ಸೂರ್ಯ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಈಗ ಅವರು ಒಂದು ಧರ್ಮದವರ ಪಟ್ಟಿ ಓದಿದರು ಎಂದು. ಅವರನ್ನು ಟೀಕಿಸುತ್ತ ಈ ವಿಚಾರದಲ್ಲಿ ಹಿಮ್ಮುಖರಾಗುವಂತೆ ಮಾಡುತ್ತಿದೆ ಇದು ಸರಿಯಲ್ಲ. ವಿರೋಧ ಪಕ್ಷಗಳು ಒಳ್ಳೆಯ ಕೆಲಸ ಮಾಡಿದ ಸಂಸದನನ್ನು ಟೀಕಿಸಲು ಸಮಯ ವ್ಯರ್ಥ ಮಾಡುವ ಬದಲು. ತಮ್ಮ ಕ್ಷೇತ್ರಗಳಲ್ಲಿ ಬೆಡ್‌ಗಳ ವ್ಯವಸ್ಥೆ ಮಾಡಲಿ. ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಕಡೆಗಳಲ್ಲಿ ತೇಜಸ್ವಿ ಸೂರ್ಯನನ್ನ ಟೀಕಿಸುವುದು. ಯಾರು ಒಪ್ಪಿಕೊಳ್ಳುವ ಮಾತಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.

About Author

Leave a Reply

Your email address will not be published. Required fields are marked *