ಕೋವಿಡ್ ಪಾಸಿಟಿವ್ ಬಂದು ಗುಣವಾದ ನಂತರ ವಿಶ್ರಾಂತಿ ವ್ಯವಸ್ಥೆಗೆ JSS ಸಂಸ್ಥೆ ಕಟ್ಟಡ
1 min read![](https://nannurumysuru.com/wp-content/uploads/2021/05/Suttur-mutt.jpg)
ಮೈಸೂರು: ಕೋವಿಡ್ ಪಾಸಿಟಿವ್ ಬಂದು ಗುಣವಾದ ನಂತರ ವಿಶ್ರಾಂತಿ ವ್ಯವಸ್ಥೆಗೆ JSS ಸಂಸ್ಥೆಯ ಎಲ್ಲಾ ವಿದ್ಯಾರ್ಥಿ ನಿಲಯಗಳು, ಸಮುದಾಯ ಭವನಗಳನ್ನು ಜಿಲ್ಲಾಢಳಿತಕ್ಕೆ ನೀಡಲು ಸುತ್ತೂರು ಮಠ ನಿರ್ಧಾರ ಮಾಡಿದೆ ಅಂತ ಸುತ್ತೂರು ಶ್ರೀಗಳು ಹೇಳಿದ್ದಾರೆ.
ಒಟ್ಟು 6 ಸಾವಿರ ಜನರಿಗೆ ವ್ಯವಸ್ಥೆ ಮಾಡಬಹುದು. ಇದಕ್ಕೆ ಊಟ ವಸತಿ ಎಲ್ಲಾ ವ್ಯವಸ್ಥೆ ಮಠದಿಂದಲೆ ಮಾಡಲಾಗುತ್ತೆ. ಅದೇ ರೀತಿ ಕೊರೊನಾಕ್ಕೆ ಪೋಷಕರು ಮೃತಪಟ್ಟ ಅನಾಥವಾದ ಮಕ್ಕಳು ಹಾಗೂ ಆರ್ಥಿಕ ಸಂಕಷ್ಟಕ್ಕೊಳಗಾದ ಕುಟುಂಬದ ಮಕ್ಕಳಿಗೆ ನೆರವು ನಿಡಲಾಗುವುದು.
![](https://nannurumysuru.com/wp-content/uploads/2023/09/Nayana-Kumars.jpg)
1ರಿಂದ 10ನೇ ತರಗತಿವರೆಗು ಉಚಿತ ಶಿಕ್ಷಣ, ವಸತಿ ವ್ಯವಸ್ಥೆಯನ್ನ ಮಠ ಕಲ್ಪಿಸಲಿದೆ. ರಾಜ್ಯದ ಹಾಗೂ ಹೊರ ರಾಜ್ಯ ಮಕ್ಕಳು ಈ ಸೌಲಭ್ಯ ಪಡೆಯಬಹುದು. ಸುತ್ತೂರಿನ ಶಾಲೆಯಲ್ಲಿ ಶಿಕ್ಷಣದ ವ್ಯವಸ್ಥೆ ಮಾಡಲು ನಿರ್ಧಾರ ಮಾಡಲಾಗಿ ಸುತ್ತೂರು ಶ್ರೀಗಳು ತಿಳಿಸಿದ್ದಾರೆ.
![](https://nannurumysuru.com/wp-content/uploads/2021/05/WhatsApp-Image-2021-05-22-at-7.45.52-PM-1024x680.jpeg)