ಸಹಾಯಕ ಪ್ರಾಧ್ಯಾಪಕ ಹುದ್ದೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ- ಮೈಸೂರು ಪ್ರೋಫೆಸರ್ ಹುದ್ದೆಯಿಂದ ಅಮಾನತು!
1 min readಸಹಾಯಕ ಪ್ರಾಧ್ಯಾಪಕ ಹುದ್ದೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಪ್ರಾಧ್ಯಾಪಕ ಪ್ರೊ.ನಾಗರಾಜು ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಪ್ರೊ ನಾಗರಾಜ್ರನ್ನ ಅಮಾನತುಗೊಳಿಸಿ ಮೈಸೂರು ವಿವಿ ಆದೇಶ ಹೊರಡಿಸಿದ್ದು, ಪ್ರೊ. ಎಚ್. ನಾಗರಾಜ್ ಅವರು ಭೂಗೋಳಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿದ್ದರು.
ಸದ್ಯ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಇಲ್ಲಿಗೆ ಕುಲಸಚಿವರಾಗಿ (ಮೌಲ್ಯಮಾಪನ) ವಿಭಾಗದಲ್ಲಿ ನೇಮಕ ಹೊಂದಿದ್ದ ನಾಗರಾಜ್ ಇವರ ವಿರುದ್ದ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಲಿ ಪೋಲಿಸ್ ಬಂಧನದಲ್ಲಿರುವ ನಾಗರಾಜ್
ಕುಲಸಚಿವ (ಮೌಲ್ಯಮಾಪನ) ಹುದ್ದೆಯಿಂದ ಬಿಡುಗಡೆಗೊಳಿಸಿ ಅಮಾನತ್ತು ಮಾಡಲಾಗಿದೆ.
27-04-2022 ಪೂರ್ವಾನ್ವಯವಾಗಿ ಆದೇಶ ಜಾರಿಯಾಗಿದ್ದು, ಮೈಸೂರು ವಿಶ್ವವಿದ್ಯಾನಿಲಯದ ಸೇವೆಯಿಂದ ಅಮಾನತು ಮಾಡಲಾಗಿದೆ. ಸದ್ಯ
ಇಲಾಖಾ ವಿಚಾರಣೆ ಕಾಯ್ದಿರಿಸಿದ್ದಾರೆ ಮೈಸೂರು ವಿವಿ.