ನೈಟ್ ಕರ್ಫ್ಯೂ ಪುನರ್ ಪರಿಶೀಲನೆ ಇಲ್ಲ- ಸಿಎಂ‌ ಬೊಮ್ಮಾಯಿ!

1 min read

ಮೈಸೂರುರಾಜ್ಯದಾದ್ಯಂತ ನೈಟ್ ಕರ್ಪ್ಯೂ ಜಾರಿ ವಿಚಾರ. ನೈಟ್ ಕರ್ಪ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ ಎಂದು ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಅಕ್ಕ ಪಕ್ಕದ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಿದ್ದು, ಇದರ ಜೊತೆಗೆ ಹಲವು ಕಠಿಣ ನಿಯಮ ಜಾರಿ ಮಾಡಲಾಗಿದೆ.‌ ಇದರಿಂದ ಉದ್ಯಮಿಗಳಿಗೆ ನಷ್ಟವಾಗುತ್ತದೆ ಅನ್ನೋದು ಗಮನಕ್ಕೆ ಬಂದಿದೆ.

ಆದರೆ ಆರೋಗ್ಯದ ಹಿತದೃಷ್ಟಿಯಿಂದ ಬದಲಾವಣೆ ಸಾಧ್ಯವಿಲ್ಲ. ಜೊತೆಯಲ್ಲಿ ಫೆಬ್ರವರಿಯಲ್ಲಿ ಓಮಿಕ್ರಾನ್ ಜಾಸ್ತಿ ಆಗುತ್ತದೆ ಅನ್ನೋ ಅಂದಾಜು ಮಾತ್ರ ಇದೆ. ಆದರೆ ಅದಕ್ಕೆ ಯಾವುದೇ ಪುರಾವೆ ಇಲ್ಲ. ದೇಶಾದ್ಯಂತ ಓಮಿಕ್ರಾನ್ ಬಗ್ಗೆ ಕಟ್ಟೆಚ್ಚರಿಕೆ ವಹಿಸಲಾಗಿದೆ. ಕೊರೊನಾ ಯೂರೋಪ್ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡ ನಂತರ ನಮ್ಮಲ್ಲೂ ಹೆಚ್ಚಾಗಿ ಕಾಣಿಸಿಕೊಂಡಿತ್ತು. ಅದೇ ಆಧಾರದಲ್ಲಿ ತಜ್ಞರು ಹೇಳಿದ್ದಾರೆ. ಅದಾಗ್ಯೂ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದೇವೆ ಎಂದು ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ

About Author

Leave a Reply

Your email address will not be published. Required fields are marked *