ತ್ರಿವಳಿ ತಲಾಕ್ ನಂತೆ ದೇಶದಲ್ಲಿ ಬುರ್ಖಾ ಧರಿಸುವುದನ್ನು ನಿಷೇಧಿಸಿ: ರಿಷಿ ಕುಮಾರ ಸ್ವಾಮೀಜಿ ಒತ್ತಾಯ

1 min read

ಮೈಸೂರು,ಜ.28-ತ್ರಿವಳಿ ತಲಾಕ್ ನಿಷೇಧ ಮಾಡಿದಂತೆ ದೇಶದಲ್ಲಿ ಬುರ್ಖಾ ಧರಿಸುವುದನ್ನು ನಿಷೇಧಿಸಬೇಕೆಂದು ರಿಷಿ ಕುಮಾರ ಸ್ವಾಮೀಜಿ ಒತ್ತಾಯಿಸಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿವಾದದ ಕುರಿತು ಮಾತನಾಡಿದ ಅವರು, ಕೇವಲ ಶಾಲೆಗಳಲ್ಲಿ ಮಾತ್ರವಲ್ಲ ರಾಜ್ಯ ಹಾಗೂ ದೇಶದಲ್ಲಿ ಬುರ್ಖಾ ಧರಿಸುವುದನ್ನು ನಿಷೇಧಿಸಬೇಕು ಎಂದರು.
ನೀವು ಬುರ್ಖಾ ಧರಿಸಿ ಬಂದರೆ ನಿಮ್ಮ ಗುರುತು ಪತ್ತೆಯಾಗುವುದಿಲ್ಲ.
ವಿದ್ಯಾರ್ಥಿನಿಯೇ ಬರುತ್ತಾರೋ ಅವರ ಅಕ್ಕ ತಂಗಿ ಅಮ್ಮ ಬರುತ್ತಾರೋ ಹೇಗೆ ಗೊತ್ತಾಗುತ್ತದೆ? ಪರೀಕ್ಷೆ ಯಾರು ಬರೆಯುತ್ತಾರೆ ಅನ್ನೋದು ಹೇಗೆ ಗೊತ್ತಾಗುತ್ತದೆ. ಶಾಲೆಯ ಶಿಕ್ಷಕರು ತಂದೆ- ತಾಯಿಯಂತೆ, ಸಹಪಾಠಿಗಳು ಸಹೋದರರಂತೆ ಅವರನ್ನು ಅನುಮಾನಿಸದರೆ ಹೇಗೆ? ಎಂದು ಪ್ರಶ್ನಿಸಿದರು.
ಮಸೀದಿ ತೆರವುಗೊಳಿಸಿ ಹನುಮ ದೇವಸ್ಥಾನ ಕಟ್ಟಬೇಕೆಂಬ ಹೇಳಿಕೆಗೆ ಈಗಲೂ ಬದ್ಧ:
ಶ್ರೀರಂಗಪಟ್ಟಣದ ಮಸೀದಿ ತೆರವು ಮಾಡಿ ಹನುಮ ದೇವಸ್ಥಾನ ಕಟ್ಟಬೇಕೆಂಬ ಹೇಳಿಕೆಗೆ ನಾನು ಈಗಲೂ ಬದ್ದನಾಗಿದ್ದೇನೆ. ಅಲ್ಲಿ ನನ್ನ ಹನುಮನ ದೇವಸ್ಥಾನ ಕಟ್ಟಲೇ ಬೇಕು ಎಂದು ಒತ್ತಾಯಿಸಿದರು.  ಕೇವಲ ಶ್ರೀರಂಗಪಟ್ಟಣ ಮಾತ್ರವಲ್ಲ. ರಾಜ್ಯದ ಪ್ರತಿ ಹಳ್ಳಿಗೂ ಹೋಗುತ್ತೇನೆ. ನಾನು ಒಬ್ಬನೇ ಹೋಗುತ್ತೇನೆ. ಗುಂಪಿನ ಜೊತೆ ಹೋಗುವುದಿಲ್ಲ. ಲಂಕೆಯನ್ನು ಸುಟ್ಟಿದ್ದು ಒಬ್ಬನೇ ಹನುಮ ಎಂದು ಹೇಳಿದರು.
ಆಜಾನ್ ಕೂಗುವ ಲೌಡ್ ಸ್ಪೀಕರ್‌ಗಳನ್ನು ತೆಗೆದು ಹಾಕಬೇಕು. ಸುಪ್ರೀಂ ಕೋರ್ಟ್ ಕೂಡ ತೆಗೆಯಲು ಸೂಚನೆ ನೀಡಿದೆ. ಈ ಸಂಬಂಧ ಈಗಾಗಲೇ ಹೋರಾಟ ಆರಂಭಿಸಿದ್ದೇನೆ.
ನಿಮ್ಮ ಬೆದರಿಕೆಗೆ  ಹೆದರುವುದಿಲ್ಲ. ಈ ರೀತಿ ಹೇಳುವುದು ಪ್ರಚೋದನೆ. ರಾಜ್ಯ ಸರ್ಕಾರ ದೇವಸ್ಥಾನ ಒಡೆದು‌ ಮಸೀದಿ ಕಟ್ಟಿರುವುದನ್ನು ಪತ್ತೆ ಹಚ್ಚಬೇಕು. ಈ ರೀತಿಯ ದೇಗುಲಗಳನ್ನು ನಾವು ಪತ್ತೆ ಹಚ್ಚುತ್ತೇವೆ. ಅದಕ್ಕಾಗಿ ಸಮಿತಿ ರಚಿಸಿ ನಮಗೆ ರಕ್ಷಣೆ ಕೊಡಬೇಕು ಎಂದು ಮನವಿ ಮಾಡಿದರು.

About Author

Leave a Reply

Your email address will not be published. Required fields are marked *