ಸಿಎಂ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ

1 min read

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಸಿಎಂ ಬೊಮ್ಮಾಯಿ ಅವರಿಗೆ ಕೋವಿಡ್ ತಗಲಿತ್ತು.

ಈ ಬೆನ್ನಲೆ ಸಂಜೆ 4:30ಕ್ಕೆ ದೂರವಾಣಿ ಮೂಲಕ ಮೋದಿ ಅವರು ಸಿಎಂ ಗೆ ಕರೆ ಮಾಡಿದ್ದಾರೆ. ಈ ವೇಳೆ ಪ್ರಧಾನಿಯವರು ಬೊಮ್ಮಾಯಿ ಅವರಿಗೆ ಸೂಕ್ತ ಚಿಕಿತ್ಸೆ ಪಡೆಯಿರಿ ಎಂಬ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು ಐದು ನಿಮಿಷಗಳ ಕಾಲ ನಡೆದ ಮಾತುಕತೆ ನಡೆಸಿದ್ದಾರೆ.

ತಮಗೆ ಕೋವಿಡ್ ತಗಲಿರುವ ಬಗ್ಗೆ ವಿವರಣೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ. ತಮ್ಮ ಜೊತೆಗೆ ಕುಟುಂಬದ ಇಬ್ಬರು ಸದಸ್ಯರಿಗೂ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ. ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿಯವರು ಸಲಹೆ ನೀಡಿದ್ದಾರೆ.

ಇನ್ನು ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿಗಳಿಗೆ ಮಾಹಿತಿ ನೀಡಿದ್ದಾರೆ. ಇದೀಗ ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದೇನೆ. ಜನವರಿ 13ರಂದು ಸಂಜೆ ತಾವು ಕರೆದಿರುವ ಕೋವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿ ರೂಪದಲ್ಲಿ ಈ ಸಭೆ ನಡೆಸುತ್ತಿದ್ದೇನೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಸಿಕೆ ಅಭಿಯಾನವನ್ನು ತೀವ್ರಗೊಳಿ ಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯದಲ್ಲಿನ ಕುರಿತು ವಿವರಣೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *