ನಟ ಪುನೀತ್​ ಬಗ್ಗೆ ಮಂಗಳೂರು‌ ಪೊಲೀಸ್ ಕಮಿಷನರ್​ ಮಾಡಿದ ಟ್ವೀಟ್​ ವೈರಲ್​.

1 min read

ಮಂಗಳೂರು: ಪುನೀತ್​ ರಾಜಕುಮಾರ್‌ಗೆ ಕರ್ನಾಟಕದ ಮನೆ ಮನೆಗಳಲ್ಲು ಅಭಿಮಾನಿಗಳು ಇದ್ದಾರೆ. ಹೀಗಾಗಿ ಪುನೀತ್​ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಆಗ್ರಹಗಳು ಕೇಳಿಬರುತ್ತಿವೆ.

ಈ ನಡುವೆ ಸ್ವತಃ ಪೊಲೀಸ್ ಆಯುಕ್ತರಿಂದಲೇ ಇಂತಹದೊಂದು ಮನವಿ ಸಹ ಕೇಳಿ ಬಂದಿದೆ. ಹೌದು, ಪುನೀತ್​ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಮಂಗಳೂರು‌ ಪೊಲೀಸ್ ಕಮಿಷನರ್ ಶಶಿಕುಮಾರ್​ ಅವರು ಟ್ವಿಟರ್​ನಲ್ಲಿ ಅಭಿಯಾನ ಆರಂಭಿಸಿದ್ದಾರೆ.

ಮಂಗಳೂರು‌ ಪೊಲೀಸ್ ಕಮಿಷನರ್ ಶಶಿಕುಮಾರ್​ ಅವರ ಟ್ವಿಟ್

ನಾಗರಿಕ ಸೇವೆಗಳ ಹಿನ್ನೆಲೆಯಲ್ಲಿ ಕೊಡಮಾಡುವ ಪದ್ಮಶ್ರೀ ಅವಾರ್ಡ್​ಗೆ ಅವರು ಅರ್ಹರು. ಪುನೀತ್ ರಾಜ್ ಕುಮಾರ್ ಕೂಡ ಸಾಕಷ್ಟು ನಾಗರಿಕ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಇಡೀ ಕುಟುಂಬ ನೋಡಬಹುದಾದಂತಹ ಚಿತ್ರಗಳನ್ನೇ ಮಾಡಿದ್ದರು. ಇನ್ನು ಕೌಟುಂಬಿಕ ಚಿತ್ರಗಳನ್ನು ನೋಡುವುದು ಹೇಗೆ? ಪದ್ಮಶ್ರೀ ಪ್ರಶಸ್ತಿ ನೀಡುವುದರ ಮೂಲಕ ಅವರಿಗೆ ಗೌರವ ಸಿಗಬೇಕು ಅನ್ನೋ ಆಸೆ ನಮಗಿದೆ ಎಂದು ಕಮಿಷನರ್ ಟ್ವೀಟ್​ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *