ರಾಹುಲ್ ಗಾಂಧಿ ಜನ್ಮದಿನ ಅಂಗವಾಗಿ ಸೇವಾದಳ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ವಿತರಣೆ
1 min read![](https://nannurumysuru.com/wp-content/uploads/2021/06/image-11.jpg)
ಬೆಂಗಳೂರು: ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ರೇಸ್ ಕೋರ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಸೇವಾದಳ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ವಿತರಿಸುವ ಕಾರ್ಯಕ್ರಮವನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
![](https://nannurumysuru.com/wp-content/uploads/2021/06/WhatsApp-Image-2021-06-19-at-12.27.36-PM-963x1024.jpeg)
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ವತಃ ವೈದ್ಯರೂ ಆಗಿರುವ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯ್ ಸಿಂಗ್ ಅವರು ಕಾರ್ಯಕರ್ತರಿಗೆ ಲಸಿಕೆ ಹಾಕಿದರು.
![](https://nannurumysuru.com/wp-content/uploads/2023/09/Nayana-Kumars.jpg)