ಹಿರಿಯ ಮುಖಂಡ ಹಿನಕಲ್ ಬಸವೇಗೌಡ ನಿಧನ- ಅಂತಿಮ ನಮನ ಸಲ್ಲಿಸಿದ ಸಿದ್ದರಾಮಯ್ಯ!

1 min read

ಮೈಸೂರು : ಮೈಸೂರಿನಲ್ಲಿ ನಿನ್ನೆ ನಿಧನರಾದ ಹಿರಿಯ ಮುಖಂಡ ಹಿನಕಲ್ ಬಸವೇಗೌಡರ ನಿವಾಸಕ್ಕೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಬಸವೇಗೌಡರ ಕುಟುಂಬದವರಿಗೆ ಸಾಂತ್ವನ ಹೇಳಿದ ಅವರು ಬಸವೇಗೌಡರ ಕಾರ್ಯವನ್ನು ಸ್ಮರಿಸಿದರು. ಸಿದ್ದರಾಮಯ್ಯ ಅವರಿಗೆ ಈ ವೇಳೆ ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ವಿಜಯಕುಮಾರ್ ಸೇರಿದಂತೆ ಹಲವರು ಸಾಥ್ ನೀಡಿದರು.

ಶಾರದದೇವಿನಗರದ ಸಿದ್ದರಾಮಯ್ಯ ನಿವಾಸ

-ಇದಾದ ಬಳಿಕ ನೇರವಾಗಿ ಮೈಸೂರಿನ ತಮ್ಮ ಶಾರದದೇವಿನಗರದ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ, ಮೈಸೂರು ಮೇಯರ್ ಚುನಾವಣೆ ವಿಚಾರವಾಗಿ ಸ್ಥಳೀಯ ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ. ಬಳಿಕ ಮನೆಯ ಬಳಿ ಬಂದಿದ್ದ ಸಾಕಷ್ಟು ಜನರ ಅಹವಾಲು ಸ್ವೀಕರಿಸಿದರು. ಬಳಿಕ ಮೈಸೂರಿನಿಂದ ಬೆಂಗಳೂರಿಗೆ ತೆರಳಿದ್ದಾರೆ.

About Author

Leave a Reply

Your email address will not be published. Required fields are marked *