ರಾಷ್ಟ್ರಮಟ್ಟದ ಕಲೋತ್ಸವ ಸ್ಪರ್ಧೆಗೆ ಮುಸುವಿನಕೊಪ್ಪಲು ವಿದ್ಯಾರ್ಥಿನಿ ಆಯ್ಕೆ

1 min read

ಮೈಸೂರು: ಭಾರತ ಸರಕಾರದ ಶಾಲಾ ಶಿಕ್ಷಣ ಸಚಿವಾಲಯದಿಂದ ಆಯೋಜಿಸುವ ರಾಷ್ಟ್ರೀಯ ಮಟ್ಟದ ಕಲೋತ್ಸವದಲ್ಲಿ ಸ್ಪರ್ಧಿಸಲು ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಮುಸುವಿನ ಕೊಪ್ಪಲಿ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸುಶ್ಮಿತ ಆಯ್ಕೆಯಾಗಿದ್ದಾಳೆ.

ಶಿಕ್ಷಣದಲ್ಲಿ ಕಲೆಯನ್ನು ಪ್ರೋತ್ಸಾಹಿಸಿ, ಪೋಷಿಸುವ ನಿಟ್ಟಿನಲ್ಲಿ ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹಾಗೂ ಅದರ ವೈವಿಧ್ಯತೆಯನ್ನು ಕಲೆಯ ಮೂಲಕ ಶಾಲಾ ಮಕ್ಕಳಿಗೆ ಅರ್ಥೈಸಲು ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ.

ಈ ಹಿನ್ನೆಲೆ 2021-22ನೇ ಸಾಲಿನಲ್ಲಿ 9 ರಿಂದ 12 ತರಗತಿವರೆಗಿನ ವಿದ್ಯಾರ್ಥಿಗಳಿಗೆ ವರ್ಚುಯಲ್ ಆಗಿ ನಡೆದ ರಾಜ್ಯಮಟ್ಟದ ಕಲೋತ್ಸವ ಸ್ಪರ್ಧೆಗೆ ಭಾಗವಹಿಸಿ ದೃಶ್ಯಕಲಾ 2ಡಿ ವಿಭಾಗದಲ್ಲಿ ‘ತೊಗಲುಗೊಂಬೆ’ ಚಿತ್ರ ತಯಾರಿಸಿದ 9ನೇ ತರಗತಿ ವಿದ್ಯಾರ್ಥಿನಿ ಸುಶ್ಮಿತ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಈ ಮೂಲಕ 2022ನೇ ಜನವರಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕಳೆದ ಬಾರಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಮುಸುವಿನಕೊಪ್ಪಲು ಸರಕಾರಿ ಪ್ರೌಢಶಾಲೆಯ ಕಲಾ ಶಿಕ್ಷಕ ಸುರೇಶ್ ಕೆ. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಲೋಕೇಶ್ ಎಂ. ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದರು. ಇದೀಗ ಶಾಲೆಯಿಂದ ಎರಡನೇ ಬಾರಿ ಸ್ಪರ್ಧಿಸಲಾಗುತ್ತಿದೆ.

ಗ್ರಾಮೀಣ ಪ್ರತಿಭೆಯಾದ ಸುಶ್ಮಿತ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುವ ಹಿನ್ನೆಲೆ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ ಶಾಲೆಯ ಕಲಾ ಶಿಕ್ಷಕ ಸುರೇಶ್ ಕೆ. ಹಾಗೂ ಶಾಲಾ ಮುಖ್ಯಶಿಕ್ಷಕರಾದ ಸಿದ್ದಪ್ಪಾಜಿ ಎಂ. ಅವರು ವಿದ್ಯಾರ್ಥಿನಿಗೆ ಅಭಿನಂದನೆ ಕೋರಿದ್ದಾರೆ

About Author

Leave a Reply

Your email address will not be published. Required fields are marked *